ಸಂಭಾಪೂರ ಗ್ರಾಮ: ಪಶು ಆರೋಗ್ಯ ತಪಾಸಣಾ ಶಿಬಿರ
ಗದಗ 27: ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದಿಂದ ದಿ. 23ರಿಂದ 29ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಡಿಯಲ್ಲಿ ದಿ. 26ರಂದು ಉಚಿತ ಪಶು ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಸಂತೋಷ ಸಾರಂಗಮಠ., ಡಾ. ಶ್ರೀಕಾಂತ ಕಲಬುರ್ಗಿ, ಡಾ. ಸೋಮಶೇಖರ ಹಬಗೊಂಡೆ, ಡಾ. ಪ್ರದೀಪ ಚವ್ಹಾಣ, ಡಾ. ಸುಪ್ರೀತ್, ಡಾ. ಕ್ಸೇವಿಯರ್, ಡಾ. ಮಾಲತಿ, ಡಾ. ನಾಗಭೂಷಣ, ಡಾ. ನಿಕಿತಾ, ಪಶುಪಾಲನ ಇಲಾಖೆಯಿಂದ ಡಾ. ಎ. ಕೆ. ಗಾಣಿಗೇರ, ಹಿರಿಯ ಪಶುವೈದ್ಯಾಧಿಕಾರಿಗಳು ಮತ್ತು ಧಾರವಾಡ-ಗದಗ ಹಾಲು ಒಕ್ಕೂಟದ ಪಶುವೈದ್ಯಾಧಿಕಾರಿಗಳಾದ ಡಾ. ಎಕನಾಥ್ ರವರು ಭಾಗವಹಿಸಿದ್ದರು. ಶಿಬಿರದಲ್ಲಿ ಸುಮಾರು 50 ಜಾನುವಾರುಗಳಿಗೆ ಉಚಿತವಾಗಿ ಚಿಕಿತ್ಸೆ ಮಾಡಲಾಯಿತು. ಪಶುವೈದ್ಯಕೀಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಡಾ. ಸತೀಶ ಚಂದ್ರ ಬಿರಾದಾರ್ ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಜೆ ನಡೆದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ಸುರೇಶ ವಿ ನಾಡಗೌಡರ, ಕುಲಪತಿಗಳು ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ವಿಶ್ವವಿದ್ಯಾಲಯ, ಗದಗ ರವರು ಗ್ರಾಮೀಣಾಭಿವೃದ್ಧಿಯ ಬಗ್ಗೆ ಮಾತನಡಿದರು. ಕಾರ್ಯಕ್ರಮದಲ್ಲಿ ಅಬ್ದುಲ್ ಅಜೀಜ್, ಸಹಾಯಕ ನಿರ್ದೇಶಕರು, ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ವಿಶ್ವವಿದ್ಯಾಲಯ, ಊರಿನ ಗಣ್ಯರು, ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಎಸ್. ವಿ. ಹಿರೇಮಠ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 