ರಾಯಬಾಗ: ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾರ್ಯಾಗಾರ
ಲೋಕದರ್ಶನ ವರದಿ
ರಾಯಬಾಗ 14: ತಾಲೂಕಿನ ಎಲ್ಲ ಪ್ರೌಢಶಾಲೆಗಳು ಈ ಬಾರಿ ಶೇ.100 ಫಲಿತಾಂಶ ಪಡೆಯಲು ವಿದ್ಯಾಥರ್ಿಗಳನ್ನು ಸಜ್ಜುಗೊಳಿಸಬೇಕೆಂದು ಪ್ರಭಾರಿ ಬಿಇಒ ಎಚ್.ಎ.ಭಜಂತ್ರಿ ತಿಳಿಸಿದರು.
ಇತ್ತಿಚೆಗೆ ಪಟ್ಟಣದ ಆರ್.ವಿ.ಆರ್. ಶಾಲೆಯಲ್ಲಿ ರಾ.ವಿ.ಸಂಯುಕ್ತ ಪದವಿ ಪೂರ್ವಮಹಾವಿದ್ಯಾಲಯ (ಪ್ರೌಢಶಾಲೆ ವಿಭಾಗ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ ಎಸ್ಎಸ್ಎಲ್ಸಿ ಹಿಂದಿ ವಿಷಯದ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಕೆ ಕಾಯರ್ಾಗಾರ ಉದ್ಘಾಟಸಿ ಮಾತನಾಡಿದ ಅವರು, ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸಲಾಗುವುದು ಎಂದರು.
ಎಸ್.ಎಸ್.ಹಚಡದ, ವಿ.ಎಸ್.ಕಾಂಬಳೆ, ಕೆ.ರಾಮನಗೌಡ, ಜಿ.ಬಿ.ಕಲ್ಲೋಳ ಸೇರಿದಂತೆ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಶಿಕ್ಷಕರು ಭಾಗವಿಸಿದ್ದರು. ಶಿಕ್ಷಕ ಪಿ.ಎಸ್.ಅಲಗೂರ ಸ್ವಾಗತಿಸಿದರು, ಡಿ.ಎನ್.ನದಾಫ ನಿರೂಪಿಸಿ, ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 