‘ಭಾಗ್ಯವಂತರು’ ನೂತನ ತಂತ್ರಜ್ಞಾನದಲ್ಲಿ!
ಬೆಂಗಳೂರು, ಜುಲೈ 2: ಕನ್ನಡ ಪ್ರೇಕ್ಷಕರು ಎಂದಿಗೂ ಮರೆಯಲಾಗದ ಚಿತ್ರ ಡಾ.ರಾಜ್ ಅಭಿನಯದ ‘ಭಾಗ್ಯವಂತರು’. ಈ ಚಿತ್ರ ನೂತನ ತಂತ್ರಜ್ಞಾನದಲ್ಲಿ ಮತ್ತೆ ಅಭಿಮಾನಿಗಳೆದರು ಬರಲು ಸಿದ್ಧವಾಗಿದೆ.
ಶ್ರೀ ಮುನೇಶ್ವರ ಫಿಲಂಸ್ ಮಾಲೀಕರಾದ ಎಂ. ಮುನಿರಾಜು ಈ ಪ್ರಯತ್ನದಲ್ಲಿದ್ದು, ಕೊರೋನಾ ಹಾವಳಿಯ ಬಳಿಕ ರಾಜ್ಯದ ಕಲಾಭಿಮಾನಿಗಳಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ. ದ್ವಾರಕೀಶ್ ಚಿತ್ರ ಸಂಸ್ಥೆಯಲ್ಲಿ ತಯಾರಾಗಿ ಸೂಪರ್ ಹಿಟ್ ಆದ ಚಿತ್ರ ಇಂದಿನ ತಂತ್ರಜ್ಞಾನದಲ್ಲಿ ಸಿನಿಮಾಸ್ಕೋಪ್ 7.1ಡಿ.ಐ ಬಳಸಿಕೊಳ್ಳಲಾಗಿದೆ. ‘ಭಾಗ್ಯವಂತರು’ ಕಿವಿಗೆ ಇಂಪಾದ ಹಾಡುಗಳೊಂದಿಗೆ ರಾಜ್ ಕುಮಾರ್, ಬಿ. ಸರೋಜಾದೇವಿ, ಅಶೋಕ್ ಮೊದಲಾದವರು ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ.
ರಾಜನ್-ನಾಗೇಂದ್ರ ಜೋಡಿಯ ಸಾಹಿತ್ಯಕ್ಕೆ ಚಿ. ಉದಯಶಂಕರ್ ಸಂಗೀತ ಸಂಯೋಜನೆಯಿದೆ. ದ್ವಾರಕೀಶ್ ನಿರ್ಮಾಣದ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಬ್ರಹ್ಮ ಭಾರ್ಗವ. ಈ ಚಿತ್ರವನ್ನು ಮತ್ತೆ ರಾಜ್ಯದ ಜನರ ಮನರಂಜಿಸಲು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ಶ್ರೀ ಮುನೇಶ್ವರ ಫಿಲಂಸ್ ನ ಎಂ. ಮುನಿರಾಜು ಮುಂದಾಗಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 