‘ಭಾಗ್ಯವಂತರು’ ನೂತನ ತಂತ್ರಜ್ಞಾನದಲ್ಲಿ!
ಬೆಂಗಳೂರು, ಜುಲೈ 2: ಕನ್ನಡ ಪ್ರೇಕ್ಷಕರು ಎಂದಿಗೂ ಮರೆಯಲಾಗದ ಚಿತ್ರ ಡಾ.ರಾಜ್ ಅಭಿನಯದ ‘ಭಾಗ್ಯವಂತರು’. ಈ ಚಿತ್ರ ನೂತನ ತಂತ್ರಜ್ಞಾನದಲ್ಲಿ ಮತ್ತೆ ಅಭಿಮಾನಿಗಳೆದರು ಬರಲು ಸಿದ್ಧವಾಗಿದೆ.
ಶ್ರೀ ಮುನೇಶ್ವರ ಫಿಲಂಸ್ ಮಾಲೀಕರಾದ ಎಂ. ಮುನಿರಾಜು ಈ ಪ್ರಯತ್ನದಲ್ಲಿದ್ದು, ಕೊರೋನಾ ಹಾವಳಿಯ ಬಳಿಕ ರಾಜ್ಯದ ಕಲಾಭಿಮಾನಿಗಳಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ. ದ್ವಾರಕೀಶ್ ಚಿತ್ರ ಸಂಸ್ಥೆಯಲ್ಲಿ ತಯಾರಾಗಿ ಸೂಪರ್ ಹಿಟ್ ಆದ ಚಿತ್ರ ಇಂದಿನ ತಂತ್ರಜ್ಞಾನದಲ್ಲಿ ಸಿನಿಮಾಸ್ಕೋಪ್ 7.1ಡಿ.ಐ ಬಳಸಿಕೊಳ್ಳಲಾಗಿದೆ. ‘ಭಾಗ್ಯವಂತರು’ ಕಿವಿಗೆ ಇಂಪಾದ ಹಾಡುಗಳೊಂದಿಗೆ ರಾಜ್ ಕುಮಾರ್, ಬಿ. ಸರೋಜಾದೇವಿ, ಅಶೋಕ್ ಮೊದಲಾದವರು ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ.
ರಾಜನ್-ನಾಗೇಂದ್ರ ಜೋಡಿಯ ಸಾಹಿತ್ಯಕ್ಕೆ ಚಿ. ಉದಯಶಂಕರ್ ಸಂಗೀತ ಸಂಯೋಜನೆಯಿದೆ. ದ್ವಾರಕೀಶ್ ನಿರ್ಮಾಣದ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಬ್ರಹ್ಮ ಭಾರ್ಗವ. ಈ ಚಿತ್ರವನ್ನು ಮತ್ತೆ ರಾಜ್ಯದ ಜನರ ಮನರಂಜಿಸಲು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ಶ್ರೀ ಮುನೇಶ್ವರ ಫಿಲಂಸ್ ನ ಎಂ. ಮುನಿರಾಜು ಮುಂದಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 