‘ಭಾಗ್ಯವಂತರು’ ನೂತನ ತಂತ್ರಜ್ಞಾನದಲ್ಲಿ!
ಬೆಂಗಳೂರು, ಜುಲೈ 2: ಕನ್ನಡ ಪ್ರೇಕ್ಷಕರು ಎಂದಿಗೂ ಮರೆಯಲಾಗದ ಚಿತ್ರ ಡಾ.ರಾಜ್ ಅಭಿನಯದ ‘ಭಾಗ್ಯವಂತರು’. ಈ ಚಿತ್ರ ನೂತನ ತಂತ್ರಜ್ಞಾನದಲ್ಲಿ ಮತ್ತೆ ಅಭಿಮಾನಿಗಳೆದರು ಬರಲು ಸಿದ್ಧವಾಗಿದೆ.
ಶ್ರೀ ಮುನೇಶ್ವರ ಫಿಲಂಸ್ ಮಾಲೀಕರಾದ ಎಂ. ಮುನಿರಾಜು ಈ ಪ್ರಯತ್ನದಲ್ಲಿದ್ದು, ಕೊರೋನಾ ಹಾವಳಿಯ ಬಳಿಕ ರಾಜ್ಯದ ಕಲಾಭಿಮಾನಿಗಳಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ. ದ್ವಾರಕೀಶ್ ಚಿತ್ರ ಸಂಸ್ಥೆಯಲ್ಲಿ ತಯಾರಾಗಿ ಸೂಪರ್ ಹಿಟ್ ಆದ ಚಿತ್ರ ಇಂದಿನ ತಂತ್ರಜ್ಞಾನದಲ್ಲಿ ಸಿನಿಮಾಸ್ಕೋಪ್ 7.1ಡಿ.ಐ ಬಳಸಿಕೊಳ್ಳಲಾಗಿದೆ. ‘ಭಾಗ್ಯವಂತರು’ ಕಿವಿಗೆ ಇಂಪಾದ ಹಾಡುಗಳೊಂದಿಗೆ ರಾಜ್ ಕುಮಾರ್, ಬಿ. ಸರೋಜಾದೇವಿ, ಅಶೋಕ್ ಮೊದಲಾದವರು ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ.
ರಾಜನ್-ನಾಗೇಂದ್ರ ಜೋಡಿಯ ಸಾಹಿತ್ಯಕ್ಕೆ ಚಿ. ಉದಯಶಂಕರ್ ಸಂಗೀತ ಸಂಯೋಜನೆಯಿದೆ. ದ್ವಾರಕೀಶ್ ನಿರ್ಮಾಣದ ಚಿತ್ರವನ್ನು ನಿರ್ದೇಶಿಸಿದ್ದು, ಚಿತ್ರಬ್ರಹ್ಮ ಭಾರ್ಗವ. ಈ ಚಿತ್ರವನ್ನು ಮತ್ತೆ ರಾಜ್ಯದ ಜನರ ಮನರಂಜಿಸಲು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ಶ್ರೀ ಮುನೇಶ್ವರ ಫಿಲಂಸ್ ನ ಎಂ. ಮುನಿರಾಜು ಮುಂದಾಗಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 