ಕೊರೊನಾ ಜಾಗೃತಿಗೆ ಸ್ಯಾಂಡಲ್ ವುಡ್ ಸಾಥ್
ಬೆಂಗಳೂರು, ಮೇ 23, ಸ್ಯಾಂಡಲ್ವುಡ್ ನ ಹಲವು ತಾರೆಯರು ಈಗಾಗಲೇ ಮಾಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಥ್ ನೀಡಿದ್ದು, ಇದೀಗ ಹಾಡೊಂದರ ಮೂಲಕ ಜಾಗೃತಿ ಮೂಡಿಸಲು ಸಜ್ಜಾಗಿದ್ದಾರೆ.ವೈದ್ಯಕೀಯ ಶಿಕ್ಷಣ ಇಲಾಖೆ ಈ ವಿಡಿಯೋವನ್ನು ನಿರ್ಮಿಸಿದ್ದು, ಸ್ಯಾಂಡಲ್ ವುಡ್ ನಿರ್ದೇಶಕ ಪವನ್ ಒಡೆಯರು ನಿರ್ದೇಶನ ಮಾಡಿದ್ದು, ಹಾಡಿಗೆ ಪ್ರದ್ಯಮ್ನ ಸಾಹಿತ್ಯ ಬರೆದಿದ್ದಾರೆ. ವಿ ಹರಿಕೃಷ್ಣ ಅವರು ಸಂಗೀತ ಸಂಯೋಜನೆ ಮಾಡಿದ್ದು, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಿದ್ದಾರೆ.
‘ಬದಲಾಗು ನೀನು… ಬದಲಾಯಿಸು ನೀನು' ಎಂಬ ಹಾಡಿನ ಮೂಲಕ ಕೋವಿಡ್-19 ವಿರುದ್ಧ ಎಚ್ಚರಿಕೆ ಸಂದೇಶ ನೀಡಲು ಕಲಾವಿದರು ಮುಂದಾಗಿದ್ದಾರೆ.ಮೇ. 25 ರಂದು ಸಂಜೆ 5 ಗಂಟೆಗೆ ಈ ಹಾಡು ಯೂಟ್ಯೂಬ್ನಲ್ಲಿ ಡಿಬೀಟ್ಸ್ ಚಾನಲ್ನಲ್ಲಿ ಈ ವಿಡಿಯೋ ಬಿಡುಗಡೆಗೊಳ್ಳಲಿದೆ.ಎಂಟು ನಿಮಿಷಗಳ ಈ ಹಾಡಿನಲ್ಲಿ ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಸೇರಿ ನಟರಾದ ಉಪೇಂದ್ರ, ದರ್ಶನ್, ರವಿಚಂದ್ರನ್, ಗಣೇಶ್, ರಕ್ಷಿತ್ ಶೆಟ್ಟಿ, ರವಿಶಂಕರ್, ರಮೇಶ್ ಅರವಿಂದ್, ವಿಜಯ್ ಪ್ರಕಾಶ್,ರಾಕ್ಲೈನ್ ವೆಂಕಟೇಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ ಹಾಗೂ ನಟಿಯರಾದ ಸುಮಲತಾ ಅಂಬರೀಶ್, ಶಾನ್ವಿ ಶ್ರೀವಾತ್ಸವ್, ಹರ್ಷಿಕಾ ಪೂಣಾಚ್ಛ, ಆಸಿಕಾ ರಂಗನಾಥ್, ಮುಂತಾದವರು ಅಭಿನಯಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 