ಸಂಡೂರು: ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ, ಅಗತ್ಯ ನಿರ್ದೇಶನ
Sandur: Deputy Commissioner Nagendra Prasad K visits polling booth officer training center, provides
ಬಳ್ಳಾರಿ 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಮತ್ತು ಮತಗಟ್ಟೆ ಮೇಲ್ವಿಚಾರಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆದ ನಾಗೇಂದ್ರ ಪ್ರಸಾದ್.ಕೆ ಅವರು ಖುದ್ದಾಗಿ ಭೇಟಿ ನೀಡಿ ಪರೀಶೀಲಿಸಿದರು.ಸಂಡೂರು ಪಟ್ಟಣದ ಕುಮಾರಸ್ವಾಮಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿಯವರು, ಎಸ್ಐಆರ್ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವ ಕುರಿತು ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಮತ್ತು ಮಹತ್ವದ ನಿರ್ದೇಶನಗಳನ್ನು ನೀಡಿದರು. ಎಸ್ಐಆರ್ ಪ್ರಕ್ರಿಯೆಯ ಕರ್ತವ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಆಸ್ಪದ ನೀಡಬಾರದು.
ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಯೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಎದುರಾಗಬಹುದಾದ ಸವಾಲುಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಸ್ಪಷ್ಟ ಜ್ಞಾನ ಹೊಂದಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ, ತರಬೇತಿಯ ಗುಣಮಟ್ಟವನ್ನು ಪರೀಶೀಲಿಸಿದ್ದಲ್ಲದೆ, ಅಧಿಕಾರಿಗಳ ಅನುಮಾನಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿದರು.ತರಬೇತಿ ಕಾರ್ಯಾಗಾರದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ನೋಡೆಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ತಹಶೀಲ್ದಾರ ಅನಿಲ್ ಕುಮಾರ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ನಿರಂಜನ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 