ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಂಜೀವಿನಿ ಯೋಜನೆ ವರದಾನ : ಪಿ.ಡಿ.ಓ ಶೇಷಗಿರಿ
Sanjeevini scheme a boon for women's economic self-reliance: PDO Sheshagiri
ಕಂಪ್ಲಿ 04 : ಜೀವನದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಮುಂದೆ ಬರಲು ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಪಿಡಿಒ ಹಾಲರಿ್ವ ಶೇಷಗಿರಿ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದಲ್ಲಿ ಗ್ರಾಪಂ ಹಾಗೂ ವೀರಭದ್ರೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಏರಿ್ಡಸಿದ್ದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸರಕಾರ ಸಂಜೀವಿನಿ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಮಹಿಳೆಯರಿಗೆ ವೃತ್ತಿ ತರಬೇತಿ ನೀಡುವ ಜತೆಗೆ ಆರ್ಥಿಕ ನೆರವು ನೀಡುತ್ತದೆ. ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟವು ಗ್ರಾಮದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಂಜೀವಿನಿಯಾಗಿದೆ ಎಂದರು.
ವೀರಭದ್ರೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಲತಾ ರೆಡ್ಡಿ ಮಾತನಾಡಿ, ಸಂಜೀವಿನಿ ಯೋಜನೆಯೂ ಮಹಿಳೆಯರ ಬದುಕಿಗೆ ದಾರಿ ದೀಪವಾಗಿದೆ. ಈ ಯೋಜನೆಗಳ ಸದುಪಯೋಗದೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದರು. ಗ್ರಾಪಂ ಅಧ್ಯಕ್ಷ ರಮಣಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಈಶ್ವರಿ, ಸಂಪನ್ಮೂಲ ವ್ಯಕ್ತಿ ಶ್ರೀಗೌರಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಬಸಮ್ಮ, ವರಲಕ್ಷ್ಮಿ, ಬಿಆರ್ಪಿ ಅಶ್ವಿನಿ, ಪಶುಸಕಿ ರೇಖಾ, ಕೃಷಿಸಕಿ ವಸಂತಿ, ನಾರಿಸಕಿ ವೀಣಾ, ಒಕ್ಕೂಟದ ಸಿಬ್ಬಂದಿಗಳಾದ ಉಮಾ ಶಂಕರಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 