ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಂಜೀವಿನಿ ಯೋಜನೆ ವರದಾನ : ಪಿ.ಡಿ.ಓ ಶೇಷಗಿರಿ
Sanjeevini scheme a boon for women's economic self-reliance: PDO Sheshagiri
ಕಂಪ್ಲಿ 04 : ಜೀವನದಲ್ಲಿ ಆರ್ಥಿಕ ಮತ್ತು ಸಾಮಾಜಿಕವಾಗಿ ಮುಂದೆ ಬರಲು ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಪಿಡಿಒ ಹಾಲರಿ್ವ ಶೇಷಗಿರಿ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದಲ್ಲಿ ಗ್ರಾಪಂ ಹಾಗೂ ವೀರಭದ್ರೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಡೆದ ಏರಿ್ಡಸಿದ್ದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸರಕಾರ ಸಂಜೀವಿನಿ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಮಹಿಳೆಯರಿಗೆ ವೃತ್ತಿ ತರಬೇತಿ ನೀಡುವ ಜತೆಗೆ ಆರ್ಥಿಕ ನೆರವು ನೀಡುತ್ತದೆ. ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟವು ಗ್ರಾಮದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಂಜೀವಿನಿಯಾಗಿದೆ ಎಂದರು.
ವೀರಭದ್ರೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಲತಾ ರೆಡ್ಡಿ ಮಾತನಾಡಿ, ಸಂಜೀವಿನಿ ಯೋಜನೆಯೂ ಮಹಿಳೆಯರ ಬದುಕಿಗೆ ದಾರಿ ದೀಪವಾಗಿದೆ. ಈ ಯೋಜನೆಗಳ ಸದುಪಯೋಗದೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದರು. ಗ್ರಾಪಂ ಅಧ್ಯಕ್ಷ ರಮಣಯ್ಯ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಈಶ್ವರಿ, ಸಂಪನ್ಮೂಲ ವ್ಯಕ್ತಿ ಶ್ರೀಗೌರಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಬಸಮ್ಮ, ವರಲಕ್ಷ್ಮಿ, ಬಿಆರ್ಪಿ ಅಶ್ವಿನಿ, ಪಶುಸಕಿ ರೇಖಾ, ಕೃಷಿಸಕಿ ವಸಂತಿ, ನಾರಿಸಕಿ ವೀಣಾ, ಒಕ್ಕೂಟದ ಸಿಬ್ಬಂದಿಗಳಾದ ಉಮಾ ಶಂಕರಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 