ಹನುಮಾನ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
Sankirtana Yatra by Hanuman Maladharis
ಯರಗಟ್ಟಿ 10: ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂಸೇವಕರು, ಭಜರಂಗದಳ ಹಾಗೂ ಹನುಮಾನ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಿತು.
ಮಾರುತಿ ದೇವಸ್ಥಾನ ಆವರಣದಿಂದ ಆರಂಭವಾದ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ, ಭಾವಚಿತ್ರದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ದಾರಿಯುದ್ದಕ್ಕೂ ಜಯಘೋಷ ಮೊಳಗಿದವು. ಲೋಕಾಪೂರ ಹಿರೇಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಧರ್ಮ ಜಾಗರಣ ಪ್ರಾಂತ ಸಂಯೋಜಕರಾದ ದೀಲಿಪಜೀ ವರ್ಣೇಕರ ಅಧ್ಯಕ್ಷತೆ ವಹಿಸಿದ್ದರು.
ಈ ವೇಳೆ ಆನಂದ ನಾಯ್ಕ, ಗೋವಿಂದ ಪೂಜೇರ, ಶಿವನಾಯಕ್ ಬೂದಿಗೊಪ್ಪ, ಮಂಜು ಕೊಪ್ಪದ, ಮಾರುತಿ ಭಜಂತ್ರಿ, ಅಪ್ಪಣ್ಣ ನಾವಿ, ವಿನಾಯಕ ರಾಯರ, ಶ್ರೀಧರ ಗಾಣಗಿ, ವಿಕಾಸ್ ಚಟ್ಟಿ, ಸೋಮನಾಯಕ ಬೂದಿಗೊಪ್ಪ, ಅಜೀತ ಸುರೇಬಾನ, ಪ್ರವೀಣ ಬೆಣ್ಣಿ, ಸಂತೋಷ ವಾಲಿ, ಸಾಗರ ಪಾಳೇಕರ, ಸೋನು ತಲ್ಲೂರ, ವಿಠ್ಠಲ ದಿಡಗನ್ನವರ,ಶಿವು ಬಾರ್ಕಿ, ಸೋಮು ದುಗ್ಗಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 