ಶಿಂದಿಕುರಬೇಟ ಸಿದ್ಧರಾಮೇಶ್ವರ ಶಾಲೆಯಲ್ಲಿ ಸಂಕಾಂ್ರತಿ ಹಬ್ಬ ಆಚರಣೆ
Sankranti festival celebrated at Siddarameshwara School, Shindikurabeta
ಘಟಪ್ರಭಾ, 15 : ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಕನ್ನಡ ಆದರ್ಶ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಮಕರ ಸಂಕ್ರಮಣ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರು ಹಳ್ಳಿ ಸೊಗಡಿನ ಬಟ್ಟೆಯನ್ನು ಧರಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿನಿಯರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವು ಜನಮನಸೊರೆಗೊಂಡಿತು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಖ್ಯಾದದಿಂದ ತಯಾರಿಸಿದ ಆಹಾರವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸಂಕ್ರಾಂತಿ ಹಬ್ಬದ ಕಳೆ ಎದ್ದುಕಾಣುತಿತ್ತು.
ವೇದಿಕೆ ಮೇಲೆ ಶಾಲೆಯ ಸ್ಥಳಿಯ ಆಡಳಿತ ಮಂಡಳಿ ಅಧ್ಯಕ್ಷ ಜ್ಯೋತ್ತೆಪ್ಪ ಬಂತಿ, ಭೀಮಣ್ಣ ಕಳಸನ್ನವರ, ಮಹ್ಮದ ಇಸಾಕ ಅನಸಾರಿ, ಮಾರುತಿ ಶಿರಗುರಿ, ಬಾಳು ದೇವಮಾನೆ, ವಿಠ್ಠಲ ಕಾಶಪ್ಪಗೋಳ, ಸದಾಶಿವ ಆಲೋಶಿ, ರಾಮಪ್ಪ ಕಟ್ಟಿಕಾರ, ತುಕಾರಾಮ ಬೆಳಗಲಿ, ವಿಠ್ಠಲ ಪಾಟೀಲ, ಬಸವರಾಜ ಗೋಕಾಕ, ವಿಠ್ಠಲ ಕರೋಶಿ, ಮುಖ್ಯೋಪಾಧ್ಯಾಯ ಮಹಾದೇವ ಕಡಕೋಳ, ಎಸ್.ಎಸ್. ದೊಡಮನಿ, ಎಸ್.ಎಸ್.ಮೊಗಾನಿ, ಎಸ್.ಆರ್.ತರಾಳ, ಪೂಜೇರಿ ಹಾಗೂ ವಡರಟ್ಟಿ ಸೇರಿದಂತೆ ಅನೇಕರು ಇದ್ದರು. ಕಾರ್ಯಕ್ರಮವನ್ನು ಆರಧ್ಯಾ ಬೆಳಗಲಿ ಸ್ವಾಗತಿಸಿದರು. ಪವಿತ್ರಾ ಪಟಾಯತ ನಿರೂಪಿಸಿದರು.ಸನಮ ತಟಗಾರ ವಂದಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 