ಸಂತೋಷ ತಳಕೇರಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನ

ಸಂತೋಷ ತಳಕೇರಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನ Santhosh Talakeri receives the Education Seva Ratna Award

ಜಮಖಂಡಿ 21: ತಾಲೂಕಿನ ಹುನ್ನೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ಪ್ರಾಚಾರ್ಯರು, ಮತ್ತು ಕಸಾಪ ತಾಲೂಕಾ ಅಧ್ಯಕ್ಷ ಸಂತೋಷ ತಳಕೇರಿ ಅವರು ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದು ಬೆಂಗಳೂರನಲ್ಲಿ ನಡೆಯುವ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆ ವತಿಯಿಂದ ಸೆ. 24ರಂದು ಜರುಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುದು ಎಂದು ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ಅಧ್ಯಕ್ಷ ಶಶಿಕಾಂತ ತೇರದಾಳ ತಿಳಿಸಿದ್ದಾರೆ.  

ತಾಲೂಕಿನ ವಿವಿಧ ಪರ ಸಂಘ, ಸಂಸ್ಥೆಗಳು ಮತ್ತು ಸಂಘಟನೆಗಳು ಹಾಗೂ ಕರ್ನಾಟಕ ಪ್ರೇಸ್ ಕ್ಲಬ್ ಸಂಘಟನೆಯ ಪತ್ರಕರ್ತರು ಸಂತೋಷ ತಳಕೇರಿ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.