ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನೆಪಿನಲ್ಲಿ ಸಸಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನೆಪಿನಲ್ಲಿ ಸಸಿ Sapling in memory of the tree mother, Saalumarada Thimmakka

ಹುಬ್ಬಳ್ಳಿ   17: ಈಚೆಗೆ ಹುಬ್ಬಳ್ಳಿಯ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹುಬ್ಬಳ್ಳಿ ಮತ್ತು ಅರಣ್ಯ ಇಲಾಖೆ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನೆನಪಿಗಾಗಿ ಸಸಿಗಳನ್ನು ನೆಡಲಾಯಿತು. ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಯಮನಪ್ಪ ಕೆ., ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾಣಿ ನ್ಯಾಯಾಧೀಶರಾದ ವಿಶ್ವನಾಥ ಯಮಕನಮರಡಿ, ವಲಯ ಅರಣ್ಯ ಅಧಿಕಾರಿ ಆರ್‌.ಎಸ್‌. ಉಪ್ಪಾರ ಅವರು ಸಾಲು ಮರದ ತಿಮ್ಮಕ್ಕನ್ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.  ಈ ಸಂದರ್ಭದಲ್ಲಿ ವಕೀಲರು, ನ್ಯಾಯಾಲಯದ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.