ಮೈಸೂರು ರಾಜಮನೆತನದ ಕುಟುಂಬದಿಂದ ಸರಸ್ವತಿ ಪೂಜೆ
ಮೈಸೂರು, ಅ.5: ವಿಶ್ವವಿಖ್ಯಾತ 409 ನೇ ಮೈಸೂರು ದಸರಾದಲ್ಲಿ ಮೈಸೂರು ರಾಜಮನೆತನದ ಮುಖ್ಯಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಅವರ ಪತ್ನಿ ತ್ರಿಶಿಕಾ ಕುಮಾರಿ ಒಡೆಯರ್ ಶನಿವಾರ ಮೈಸೂರು ಅರಮನೆಯೊಳಗಿನ ಜ್ಞಾನ ದೇವತೆ ಸರಸ್ವತಿಗೆ ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಪ್ರಾರ್ಥನಾ ಮಂದಿರದಲ್ಲಿ ಯದುವೀರ್ ಅವರು ಪುಸ್ತಕಗಳು, ವೀಣೆ, ಸಂಗೀತ ಗ್ರಂಥಗಳು, ರಾಮಾಯಣ, ಮಹಾಭಾರತ ಮುಂತಾದ ಮಹಾಕಾವ್ಯಗಳಿಗೆ ಪೂಜೆ ಸಲ್ಲಿಸಿದರೆ, ತ್ರಿಶಿಕಾ ಅವರು ಅರಮನೆಯೊಳಗಿನ ವಾಣಿ ವಿಲಾಸ ಪ್ರಾರ್ಥನಾ ಮಂದಿರದಲ್ಲಿ ಜ್ಞಾನ ದೇವತೆಗೆ ಪೂಜೆ ಸಲ್ಲಿಸಿದರು.
ಇದಕ್ಕೂ ಮೊದಲು ಕನ್ನಡಿ ತೊಟ್ಟಿಯಲ್ಲಿ ಗಣಪತಿ ಪೂಜೆ, ಸರಸ್ವತಿ ಅಷ್ಟಾರ್ಚನೆ ಮತ್ತು ಚಾಮುಂಡೇಶ್ವರಿ ಪೂಜೆಗಳು ನಡೆದವು.
ರಾಜಮನೆತನದ ಸದಸ್ಯರ ಸಮ್ಮುಖದಲ್ಲಿ ನಡೆದ ಎಲ್ಲಾ ಆಚರಣೆಗಳ ಮೇಲ್ವಿಚಾರಣೆ, ಧರ್ಮಾಧಿಕಾರಿ ಜನಾರ್ದನ್ ಅಯ್ಯಂಗಾರ್, ಪುರೋಹಿತರಾದ ಶ್ಯಾಮ್ ಜೋಯಿಸ್, ಎಸ್.ನರಸಿಂಹನ್ ಅವರ ನೇತೃತ್ವದಲ್ಲಿ ನಡೆದವು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 