ಶತಕ ಬಾರಿಸಿ ಅಬ್ಬರಿಸಿದ ಸರ್ಫರಾಜ್ ಖಾನ್
ಧರ್ಮಶಾಲಾ, ಜ.27 : ಭರ್ಜರಿ ಫಾರ್ಮ್ ನಲ್ಲಿರುವ ಮುಂಬೈ ತಂಡದ ಭರವಸೆಯ ಆಟಗಾರ ಸರ್ಫರಾಜ್ ಖಾನ್ ಹಿಮಾಚಲ್ ಪ್ರದೇಶ ವಿರುದ್ಧ ರಣಜಿ ಟೂರ್ನಿಯ ಪಂದ್ಯದಲ್ಲೂ ಶತಕ ಬಾರಿಸಿ ಅಬ್ಬರಿಸಿದ್ದಾರೆ.
ಕಳೆದ ವಾರ ಉತ್ತರ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತ್ರಿ ಶತಕ ಬಾರಿಸಿದ್ದ ಸರ್ಫರಾಜ್, ತಮ್ಮ ಲಯವನ್ನು ಮುಂದುವರಿಸಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ 4 ವಿಕೆಟ್ ಗೆ 71 ರನ್ ಸೇರಿಸಿ ಸಂಕಷ್ಟದಲ್ಲಿತ್ತು. ತಂಡಕ್ಕೆ ಆಸರೆಯಾದರ ಆದಿತ್ಯ ತಾರೆ ಹಾಗೂ ಸರ್ಫರಾಜ್ ಜೋಡಿ ತಂಡಕ್ಕೆ 143 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಕೆಟ್ಟ ಎಸೆತಗಳನ್ನು ದಂಡಿಸುತ್ತಾ ಸಾಗಿದ ಜೋಡಿ, ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದರು.
ಚಹಾ ವಿರಾಮದ ವೇಳೆಗೆ ಮುಂಬೈ ಐದು ವಿಕೆಟ್ ಗೆ 260 ರನ್ ಕಲೆ ಹಾಕಿದೆ. ಆದಿತ್ಯ ತಾರೆ 8 ಬೌಂಡರಿ ಸೇರಿದಂತೆ 62 ರನ್ ಸಿಡಿಸಿದರು. ಸರ್ಫರಾಜ್ ಖಾನ್ 20 ಬೌಂಡರಿ ನೆರವಿನಿಂದ 132 ರನ್ ಬಾರಿಸಿ ಅಜೇಯರಾಗಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 