ಸರ್ವಜ್ಞ ವಿದ್ಯಾಪೀಠ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
Sarvajna Vidyapeeth: Dialogue program with students
ಸರ್ವಜ್ಞ ವಿದ್ಯಾಪೀಠ: ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ತಾಳಿಕೋಟಿ 06: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಯು.ಬಿ.ಧರಿಕಾರ ಅವರು 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಮಂಗಳವಾರ ಸಂವಾದ ನಡೆಸಿದರು.
ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯಲು ಯಾವ ಕೌಶಲ್ಯವನ್ನು ಉಪಯೋಗಿಸಬೇಕು ಎಂಬದರಕುರಿತು ತಿಳಿಸುತ್ತಾ ಕಳೆದ ಸಾಲಿನಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಮಕ್ಕಳ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಮಕ್ಕಳಿಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಕೊಟ್ಟು ಉತ್ತರ ಬರೆಯಿಸಿ ಮೌಲ್ಯಮಾಪನ ಮಾಡಿ ಮಕ್ಕಳು ಅವರು ಬರೆದಿರುವ ಉತ್ತರ ಪತ್ರಿಕೆಯನ್ನು ಕೊಟ್ಟು ಸ್ಮಾರ್ಟ್ ಬೋರ್ಡ್ ನಲ್ಲಿ ರಾಜ್ಯಕ್ಕೆ ಪ್ರಥಮ ಬಂದಂತಹ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಅನಾವರಣಗೊಳಿಸಿ ಆ ಮಕ್ಕಳು ಬರೆದಿರುವ ಉತ್ತರ ಪತ್ರಿಕೆ ಹಾಗೂ ತಾವು ಬರೆದಿರುವ ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳು ಸ್ವತಹ ಪರೀಶೀಲನೆ ಮಾಡಿಕೊಂಡು ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಳ್ಳಲು ಅಲ್ಲಿ ಬಳಸಿರುವ ಕೌಶಲ್ಯ ಹಾಗೂ ಉತ್ತರ ಬರೆಯುವ ಶೈಲಿಯನ್ನು ತಿಳಿದುಕೊಳ್ಳುವುದು ಇದರಿಂದ ನೂರಕ್ಕೆ ನೂರು ಅಂಕ ಪಡೆಯಲು ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳಲು ಮಕ್ಕಳಿಗೆ ಸಾಧ್ಯವಾಗುತ್ತದೆ ಎಂದರು.
ಸಂವಾದ ಕಾರ್ಯಕ್ರಮದಲ್ಲಿ ತಾಳಿಕೋಟಿ ಕ್ಲಸ್ಟರ್ ಸಿ.ಆರಿ್ಸ.ರಾಜು ವಿಜಾಪುರ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು, ಮುಖ್ಯ ಶಿಕ್ಷಕ ಸಂತೋಷ ಪವಾರ ಹಾಗೂ ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 