ಸಾತಪ್ಪ ಟೋಪಣ್ಣವರ ಅವರ ಹೋರಾಟ ಅವಿಸ್ಮರಣೀಯ - ಆನಂದ ಪಾಟೀಲ
Satappa Topannavar's struggle is unforgettable - Anand Patil
ಸಾತಪ್ಪ ಟೋಪಣ್ಣವರ ಅವರ ಹೋರಾಟ ಅವಿಸ್ಮರಣೀಯ - ಆನಂದ ಪಾಟೀಲ
ಯರಗಟ್ಟಿ 10: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಶಿವಾಪುರದ ಸಾತಪ್ಪ ಟೋಪಣ್ಣವರ ಅವರ ಹೋರಾಟ ಅವಿಸ್ಮರಣೀಯವಾದುದು ಎಂದು ಧಾರವಾಡದ ಹಿರಿಯ ಮಕ್ಕಳ ಸಾಹಿತಿ ಆನಂದ ಪಾಟೀಲ ಅವರು ಹೇಳಿದರು.ಸರಕಾರಿ ಪ್ರೌಢಶಾಲೆಯಲ್ಲಿ ಡಾ. ರಾಜಶೇಖರ ಬಿರಾದಾರ ಅವರು ರಚಿಸಿದ 'ಸಾತಪ್ಪ ಟೋಪಣ್ಣವರ' ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಸ್ಥಳೀಯ ಹೋರಾಟಗಾರರ ಚರಿತ್ರೆಯನ್ನು ಕೆದಕಿ ಮರುಸೃಷ್ಟಿಸುವುದು ಅಗತ್ಯವಾಗಿದೆ ಎಂದರು.ಪುಸ್ತಕ ಪ್ರಕಟಿಸಿದ ಅಭಿನವ ಪ್ರಕಾಶನದ ರವಿಕುಮಾರ ಅವರು ಮಾತನಾಡಿ, ಮಕ್ಕಳು ಬಾಲ್ಯದಿಂದಲೇ ಪಠ್ಯದೊಂದಿಗೆ ನಮ್ಮ ಸುತ್ತಲಿನ ಹೋರಾಟಗಾರರ ಚರಿತ್ರೆಯನ್ನು ಓದಬೇಕು ಎಂದು ಹೇಳಿದರು.ಲೇಖಕ ಡಾ. ರಾಜಶೇಖರ ಬಿರಾದಾರ ಅವರು ಮಾತನಾಡಿ, ಪುಸ್ತಕ ರೂಪುಗೊಂಡ ಬಗೆಯನ್ನು ವಿವರಿಸಿದರು.ಗ್ರಾಮ ಪಂಚಾಯತ ಅಧ್ಯಕ್ಷರಾದ ತವನಪ್ಪ ಟೋಪಣ್ಣವರ, ಪ್ರಗತಿಪರ ರೈತರಾದ ಮಹಾಂತೇಶ ತೋಟಗಿ, ಶಿವಲಿಂಗಯ್ಯ ಮಠಪತಿಯವರು ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯ ಪಡಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮದ ಪಾಯಪ್ಪ ಟೋಪಣ್ಣವರ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 