ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಸೌಪರ್ಣಿಕಾಗೆ ಸನ್ಮಾನ
Sauparnika, who secured third place in the state, was felicitated
ತಾಳಿಕೋಟಿ 30: ತಾಲೂಕಿನ ಬೇಲೂರ ಕ್ರಾಸ್ ಕೊಡಗಾನೂರದ ಜೆಎಸ್ ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಪರ್ಣಿಕಾ ಸಂಗನಗೌಡ ಪಾಟೀಲ 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಏಪ್ರಿಲ್ 27ರಂದು ಶಾಲೆಯಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರಿಗೆ ಈ ಗೌರವ ಸಮರೆ್ಣ ಸಲ್ಲಿಸಲಾಯಿತು. ನಾವದಗಿ ಬ್ರಹನ್ಮಠದ ಷ.ಬ್ರ.ಶ್ರೀ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಿದ್ದನಗೌಡ ಗಬಸಾವಳಗಿ, ಕಾರ್ಯದರ್ಶಿ ಸಾಹೇಬಗೌಡ ಎಸ್.ಗಬಸಾವಳಗಿ, ಸಿ.ಆರಿ್ಸ. ಸಂಗಮೇಶ ಪಾಲ್ಕಿ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಗುರುಮಾತೆ ವಿಜಯಲಕ್ಷ್ಮಿ ಎಸ್ ಗಬಸಾವಳಗಿ, ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯ ವಿನಾಯಕ ಪಟಗಾರ, ಗಣ್ಯರಾದ ಪ್ರಕಾಶ ನಾಯಕ್, ಮಾದೇವ ತಳವಾರ, ರೇವಣಸಿದ್ದಪ್ಪ ಗುಗ್ರಿ, ಸಂಗನಗೌಡ ಪಾಟೀಲ, ಶಿಕ್ಷಕರಾದ ಸಲೀಮ ಮನಿಯಾರ, ಹಣಮಂತ ಮೇಟಿ,ಸಾಬಣ್ಣ ಸರ್, ಮುತ್ತುರಾಜ ಯಡ್ರಾಮಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 