ಸವದತ್ತಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಕಳ್ಳನ ಬಂಧನ
Savadatti police conduct massive operation: Notorious thief arrested
ಸವದತ್ತಿ: ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನಡೆದಿದ್ದ ಸರಗಳ್ಳತನ ಹಾಗೂ ಸವದತ್ತಿ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಮನೆಗಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪಕ್ಕೀರಪ್ಪ ಅಲಿಯಾಸ್ ದರ್ಶನ ಗಂಗಪ್ಪ ಕಂಬಳಿ ಎಂಬ ಆರೋಪಿಯನ್ನು ಬಂಧಿಸಿ, ಸುಮಾರು 8,95,250 ರೂಪಾಯಿ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.ಜನವರಿ 4 ರಂದು ಮಧ್ಯಾಹ್ನ 1:15 ರ ಸುಮಾರಿಗೆ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಶ್ರೀಮತಿ ರೇಣುಕಾ ಲಕ್ಷ್ಮಣ ನಂದಿ ಎಂಬುವವರು ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾಗ, ಜನಸಂದಣಿಯ ಲಾಭ ಪಡೆದ ಕಳ್ಳರು ಅವರ ಕೊರಳಲ್ಲಿದ್ದ ₹80,000 ಮೌಲ್ಯದ 10 ಗ್ರಾಂ ತೂಕದ ಚಿನ್ನದ ತಾಳಿಗಳನ್ನು ಕಳ್ಳತನ ಮಾಡಿದ್ದರು.
ಈ ಬಗ್ಗೆ ಜನವರಿ 5 ರಂದು ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಮತ್ತು ಬೆಳಗಾವಿ ಹೆಚ್ಚುವರಿ ಎಸ್ಪಿ ಆರ್.ಬಿ.ಬಸರಗಿ, ರಾಮದುರ್ಗ ಡಿವೈಸ್ಪಿ ಚಿದಂಬರ ಮಡಿವಾಳರ, ಇವರ ಮಾರ್ಗದರ್ಶನದಲ್ಲಿ, ಸವದತ್ತಿ ಪಿಐ ಸುರೇಶ ಬೆಂಡೆಗುಂಬಳ ಹಾಗೂ ತಂಡದವರು ಮಾರ್ಚ್ 29 ರಂದು ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಈ ಕೆಳಗಿನ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ:ಬಂಗಾರದ ಆಭರಣಗಳು: 46 ಗ್ರಾಂ (ಮೌಲ್ಯ ₹6,90,000)ಬೆಳ್ಳಿಯ ಆಭರಣಗಳು: 675 ಗ್ರಾಂ (ಮೌಲ್ಯ ₹1,55,250) ಒಂದು ಮೋಟಾರ್ ಸ್ಕೂಟರ್ (ಮೌಲ್ಯ ₹50,000) ಕೃತ್ಯಕ್ಕೆ ಬಳಸುತ್ತಿದ್ದ ಕಬ್ಬಿಣದ ರಾಡ್ ಮತ್ತು 2 ಸ್ಕ್ರೂ ಡ್ರೈವ್ ಈ ಕಾರ್ಯಾಚರಣೆಯ ಸವದತ್ತಿ ವ್ಯಾಪ್ತಿಯಲ್ಲಿ ನಡೆದಿದ್ದ ಒಂದು ಸರಗಳ್ಳತನ (ಸೂಲಿಗೆ) ಹಾಗೂ ನಾಲ್ಕು ಮನೆಗಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.ಸವದತ್ತಿ ಪಿಐ ಸುರೇಶ ಬೆಂಡೆಗುಂಬಳ, ಪಿಎಸ್ಐಗಳಾದ ಕಲ್ಮೇಶ ಬನ್ನೂರ, ಲಕ್ಷ್ಮಣ ಗೌಡಿ ಹಾಗೂ ಸಿಬ್ಬಂದಿಗಳಾದ ಉದ್ದಪ್ಪ ಪೂಜೇರ, ಅಮರ ಸಾರಾಪೂರೆ, ಮಹೇಶ ಮಾಳಳ್ಳಿ ಮತ್ತು ತಾಂತ್ರಿಕ ತಂಡದ ವಿನೋದ ಚಿಕ್ಕಣ್ಣವರ, ಸಚೀನ ಪಾಟೀಲ, ಅವರನ್ನೊಳಗೊಂಡ ತಂಡದ ಈ ಸಾಹಸಮಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 