ಸರಕಾರಿ ಶಾಲೆ ಉಳಿಸಿ ಬೆಳೆಸಿ: ಬಾಲಚಂದ್ರ ಜಾರಕಿಹೋಳಿ
Save and develop government schools: Balachandra Jarkiholi
ಲೋಕದರ್ಶನ ವರದಿ
ಗುರ್ಲಾಪೂರ 09: ಸ್ಥಳೀಯ ಪಿಎಮ್ ಶಾಸಕರ ಶಾಲೆಗೆ ಬಾಲಚಂದ್ರ ಜಾರಕಿಹೊಳಿಯವರು ಸನ್ 2026-27 ನೇಯ ಸಾಲಿನ ದಾಖಲಾತಿ ಅಂದೋಲನಕ್ಕೆ ಚಾಲನೆ ನೀಡಿ, ಸರಕಾರಿ ಶಾಲೆ ಉಳಿಸಿ ಬೆಳೆಸಿ ಎಂದು ಕರೆ ನೀಡಿದರು.
ಬುಧವಾರ ದಿ. 8 ಎಪ್ರೀಲ್ 2026 ರಂದು ಗುರ್ಲಾಪೂರ ಪಿಎಮ್ ಶಾಸಕರ ಶಾಲೆಗೆ ಭೇಟಿ ನೀಡಿದರು. ನಂತರ ಪದವಿದರ ಮುಖ್ಯೋಪಾಧ್ಯಾಯರಾದ, ಗೋಪಾಲ ಪತ್ತಾರ, ಶಾಲಾ ಮುಖ್ಯೋಪಾಧ್ಯಾಯರಾದ ಬಸವರಾಜ ಸಸಾಲಟ್ಟಿಯವರೊಂದಿಗೆ ಮಾತನಾಡುತ್ತಾ. ಶಾಲೆಯ ಮಕ್ಕಳಿಗೆ ಯಾವುದೇ ತರಹನಾದ ಅನಾನುಕೂಲತೆ ಆಗಬಾರದು, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಮಾದರಿ ಶಾಲೆಯನ್ನಾಗಿ ಮಾಡಿರಿ ಎಂದರು.
ಶಾಲೆಯ ಕಾರ್ಯಕ್ರಮದಲ್ಲಿ ಎಸ್ಡಿಎಮ್ಸಿ ಅಧ್ಯಕ್ಷರಾದ ಎಲ್ ಪಿ ನೇಮಗೌಡರ, ಸಿದ್ದು ಗಡ್ಡೇಕಾರ, ಪ್ರಕಾಶ ಮುಗಳಖೋಡ, ಮರೆಪ್ಪಗೋಳ ಲಕ್ಷ್ಮಣಗೌರಾಣಿ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಡ್ವಿ ನರಸನ್ನವರ, ಎಲ್ ಆರ್ಸಾಲಿಮಠ, ಸುನೀಲ ತುಪ್ಪದ, ಶಿವಾನಂದ ಹಳ್ಳೂರ, ಮಹಾದೆವ ಮರಾಠೆ, ಪಿ,ಕೆ,ಪಿ,ಎಸ್ ಸೋಸಾಯಿಟಿಯ ಅಧ್ಯಕ್ಷರಾದ ಎಸ್.ಜಿ.ಹಂಚಿನಾಳ ಹಾಜರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಬಸವರಾಜ ಸಸಾಲಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 