ಜನಪದ ಉಳಿಸಿ ಸಂಸ್ಕೃತಿ ಬೆಳೆಸಿ ಕಾರ್ಯಕ್ರಮ
Save folklore and cultivate culture program
ರಾಣೇಬೆನ್ನೂರು 20 : ಭಾರತೀಯ ಸಂಸ್ಕೃತಿಯಲ್ಲಿ ವೇದ ಇತಿಹಾಸಕಾಲಗಳಿಂದಲೂ, ಆಚಾರ, ವಿಚಾರ, ಜೊತೆಗೆ ವೇಶ,ಭೂಷಣ, ಉಡುಗೆ ತೊಡೆಗೆ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವೈವಿಧ್ಯತೆ ಮತ್ತು ಏಕತೆ ಹೊಂದಿದ್ದರಿಂದಲೇ, ಇಂದಿಗೂ ಸಹ ಮಾನಸಿಕ ಶಾಂತಿ ಮತ್ತು ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ, ಇದುವೇ ನಮ್ಮ ನೈಜ ಸಂಸ್ಕೃತಿಯಾಗಿದೆ ಎಂದು ಆರ್. ಟಿ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ, ಸಂಜಯ ಸಾಹುಕಾರ ಹೇಳಿದರು. ಅವರು, ಕಾಲೇಜಿನ ವಿ.ಕೆ. ಸಾಹುಕಾರ ಸಭಾಭವನದಲ್ಲಿ ಆಯೋಜಿಸಲಾಗಿದ್ದ, ಜನಪದ ಉಳಿಸಿ ಸಂಸ್ಕೃತಿ ಬೆಳೆಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿ ಪರಂಪರೆ ವಿಶ್ವದ ಎಲ್ಲ ರಾಷ್ಟ್ರಗಳಲ್ಲಿ ವಿಶೇಷತೆಯಾಗಿದೆ. ಭಾರತೀಯರು ನೈಜ ಮತ್ತು ನಿಜ ಸಂಸ್ಕೃತಿಯ ಹರಿಕಾರರಾಗಿದ್ದಾರೆ. ನೈಜತೆ ಮತ್ತು ಸಂಸ್ಕೃತಿ ನಮ್ಮ ಪರಂಪರೆಯಾಗಿದ್ದು, ಹಿರಿಯರು ಹಾಕಿ ಕೊಟ್ಟಿರುವ ಈ ಸಂಸ್ಕಾರವನ್ನು ಉಳಿಸಿ ಬೆಳೆಸುವುದರ ಜೊತೆಗೆ, ನಮ್ಮತನವನ್ನು ನಾವು ಅಳವಡಿಸಿಕೊಳ್ಳಬೇಕಾದ ಇಂದಿನ ಅಗತ್ಯವಿದೆ ಎಂದು ಯುವ ಸಮುದಾಯಕ್ಕೆ ಅವರು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಸಿ.ಎ. ಹರಿಹರ ಅವರು ನಮ್ಮ ಸಂಸ್ಕೃತಿ ಮತ್ತು ಪರಂಪರೆ ನಮಗೆ ಅಂದ ಮತ್ತು ಚಂದ ನಮ್ಮತನ ಎನ್ನುವುದು ನಮ್ಮ ಪೂರ್ವಜರು ಹಾಕಿಕೊಟ್ಟ ಸಂಸ್ಕಾರವಾಗಿದೆ. ಆಧುನಿಕತೆಯ ಭರಾಟೆಯಲ್ಲಿ ನಮ್ಮತನವನ್ನು ನಾವು ಕಳೆದುಕೊಳ್ಳದೆ, ಇತಿಹಾಸದ ನೈಜತೆ ಮತ್ತು ಅಂದಿನ ವಿಶಿಷ್ಟ ಪರಿಕಲ್ಪನೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ವೈವಿಧ್ಯಮಯ ವೇಷಭೂಷಣಗಳನ್ನು ಧರಿಸಿ, ಸಾರ್ವಜನಿಕರ ಗಮನ ಸೆಳೆದರು. ವೇದಿಕೆಯಲ್ಲಿ ಕಾರ್ಯದರ್ಶಿ ಸೀತಾ ಕೋಟಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ, ಪ್ರೊ, ಹೆಚ್. ಜಿ. ಬಸವರಾಜ, ಸಾಂಸ್ಕೃತಿಕ ವೇದಿಕೆಯ ಕಾರ್ಯಧ್ಯಕ್ಷರು ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 