ಸೂಕ್ಷ್ಮ ನೀರಾವರಿಯಲ್ಲಿ ರಸವಾರಿ ಪದ್ಧತಿ ಮೂಲಕ ರಾಸಾಯಿನಿಕ ಗೊಬ್ಬರಗಳ ಮಿತವ್ಯಯ ಸಾಧನೆ
Saving on chemical fertilizers through drip irrigation in micro irrigation
ಸೂಕ್ಷ್ಮ ನೀರಾವರಿಯಲ್ಲಿ ರಸವಾರಿ ಪದ್ಧತಿ ಮೂಲಕ ರಾಸಾಯಿನಿಕ ಗೊಬ್ಬರಗಳ ಮಿತವ್ಯಯ ಸಾಧನೆ
ಕಂಪ್ಲಿ 08: ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪಿಎಂಕೆಎಸ್ವೈ-ಸೂಕ್ಷ್ಮ ನೀರಾವರಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪ್ರತಿ ಹನಿಗೆ ಅಧಿಕ ಬೆಳೆ) ಅಡಿಯಲ್ಲಿ ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ನಡೆಯಿತು.
ಸಹಾಯಕ ಕೃಷಿ ನಿರ್ದೇಶಕಿ ಡಾ ಅಭಿಲಾಷ ಸಿ.ಆರ್ ಕಾರ್ಯಕ್ರಮ ಉದ್ಘಾಟಿಸಿ ನಂತರ ಪ್ರಾಸ್ತಾವಿಕವಾಗಿ ಮಾತನಾಡಿ, ಸೂಕ್ಷ್ಮ ನೀರಾವರಿ ಯೋಜನೆ ಅಡಿಯಲ್ಲಿ ತುಂತುರು ಮತ್ತು ಹನಿ ನೀರಾವರಿ ಪದ್ಧತಿಗಳಿದ್ದು, ಸೂಕ್ಷ್ಮ ನೀರಾವರಿ ಪದ್ಧತಿಯಿಂದ ಶೇಕಡ 50 ರಿಂದ 70ರಷ್ಟು ನೀರಿನ ಮಿತವ್ಯಾಯ ಸಾಧಿಸಬಹುದು ಎಂದರು. ನಂತರ ಡಾ.ಜಿ.ನಾರ್ಪ ಗಂಗಾವತಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಜಿ.ನಾರ್ಪ ಮಾತನಾಡಿ, ಹನಿ ನೀರಾವರಿ ಪದ್ಧತಿಯಿಂದ ಆಗುವ ಲಾಭಗಳ ಬಗ್ಗೆ ಸಾವಿಸ್ತಾರವಾಗಿ ಮಾಹಿತಿ ನೀಡಿದರು.
ಹನಿ ನೀರಾವರಿ ಪದ್ಧತಿಯಿಂದ ಶೇ.30 ರಿಂದ 40ಅ ಇಳುವರಿ ಹೆಚ್ಚಿಸಬಹುದು. ಸೂಕ್ಷ್ಮ ನೀರಾವರಿಯಲ್ಲಿ ರಸವಾರಿ ಪದ್ಧತಿ ಮೂಲಕ 30 ರಿಂದ 40ಅ ರಷ್ಟು ರಾಸಾಯಿನಿಕ ಗೊಬ್ಬರಗಳ ಮಿತವ್ಯಯ ಸಾಧಿಸುವುದು. ಕಳೆ ನಿಯಂತ್ರಣ ಮಾಡಿ ಕೂಲಿ ವೆಚ್ಚವನ್ನು ಕಡಿಮೆ ಮಾಡಬಹುದು ಹಾಗೂ ಗಿಡದಿಂದ ಗಿಡಕ್ಕೆ ರೋಗ ಹರಡುವಿಕೆಯನ್ನು ತಡೆಗಟ್ಟಬಹುದೆಂದು ತಿಳಿಸಿದರು. ತದನಂತರ ಸಿಬ್ಬಂದಿ ರೇಣುಕಾರಾಜ್ ಮಾತನಾಡಿ, ಸೂಕ್ಷ್ಮ ನೀರಾವರಿ ಯೋಜನೆ ಅಡಿಯಲ್ಲಿ ರೈತ ಫಲಾನುಭವಿಗಳಿಗೆ ಸಿಗುವ ಸಹಾಯಧನ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ನವ್ಯ, ಶಿವಪ್ಪ ಬಾರಿಗಿಡದ್ ಸೇರಿದಂತೆ ರೈತರು ಹಾಗೂ ಸಿಬ್ಬಂದಿ.ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 