ಸೂಕ್ಷ್ಮ ನೀರಾವರಿಯಲ್ಲಿ ರಸವಾರಿ ಪದ್ಧತಿ ಮೂಲಕ ರಾಸಾಯಿನಿಕ ಗೊಬ್ಬರಗಳ ಮಿತವ್ಯಯ ಸಾಧನೆ
Saving on chemical fertilizers through drip irrigation in micro irrigation
ಸೂಕ್ಷ್ಮ ನೀರಾವರಿಯಲ್ಲಿ ರಸವಾರಿ ಪದ್ಧತಿ ಮೂಲಕ ರಾಸಾಯಿನಿಕ ಗೊಬ್ಬರಗಳ ಮಿತವ್ಯಯ ಸಾಧನೆ
ಕಂಪ್ಲಿ 08: ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪಿಎಂಕೆಎಸ್ವೈ-ಸೂಕ್ಷ್ಮ ನೀರಾವರಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪ್ರತಿ ಹನಿಗೆ ಅಧಿಕ ಬೆಳೆ) ಅಡಿಯಲ್ಲಿ ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ನಡೆಯಿತು.
ಸಹಾಯಕ ಕೃಷಿ ನಿರ್ದೇಶಕಿ ಡಾ ಅಭಿಲಾಷ ಸಿ.ಆರ್ ಕಾರ್ಯಕ್ರಮ ಉದ್ಘಾಟಿಸಿ ನಂತರ ಪ್ರಾಸ್ತಾವಿಕವಾಗಿ ಮಾತನಾಡಿ, ಸೂಕ್ಷ್ಮ ನೀರಾವರಿ ಯೋಜನೆ ಅಡಿಯಲ್ಲಿ ತುಂತುರು ಮತ್ತು ಹನಿ ನೀರಾವರಿ ಪದ್ಧತಿಗಳಿದ್ದು, ಸೂಕ್ಷ್ಮ ನೀರಾವರಿ ಪದ್ಧತಿಯಿಂದ ಶೇಕಡ 50 ರಿಂದ 70ರಷ್ಟು ನೀರಿನ ಮಿತವ್ಯಾಯ ಸಾಧಿಸಬಹುದು ಎಂದರು. ನಂತರ ಡಾ.ಜಿ.ನಾರ್ಪ ಗಂಗಾವತಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಜಿ.ನಾರ್ಪ ಮಾತನಾಡಿ, ಹನಿ ನೀರಾವರಿ ಪದ್ಧತಿಯಿಂದ ಆಗುವ ಲಾಭಗಳ ಬಗ್ಗೆ ಸಾವಿಸ್ತಾರವಾಗಿ ಮಾಹಿತಿ ನೀಡಿದರು.
ಹನಿ ನೀರಾವರಿ ಪದ್ಧತಿಯಿಂದ ಶೇ.30 ರಿಂದ 40ಅ ಇಳುವರಿ ಹೆಚ್ಚಿಸಬಹುದು. ಸೂಕ್ಷ್ಮ ನೀರಾವರಿಯಲ್ಲಿ ರಸವಾರಿ ಪದ್ಧತಿ ಮೂಲಕ 30 ರಿಂದ 40ಅ ರಷ್ಟು ರಾಸಾಯಿನಿಕ ಗೊಬ್ಬರಗಳ ಮಿತವ್ಯಯ ಸಾಧಿಸುವುದು. ಕಳೆ ನಿಯಂತ್ರಣ ಮಾಡಿ ಕೂಲಿ ವೆಚ್ಚವನ್ನು ಕಡಿಮೆ ಮಾಡಬಹುದು ಹಾಗೂ ಗಿಡದಿಂದ ಗಿಡಕ್ಕೆ ರೋಗ ಹರಡುವಿಕೆಯನ್ನು ತಡೆಗಟ್ಟಬಹುದೆಂದು ತಿಳಿಸಿದರು. ತದನಂತರ ಸಿಬ್ಬಂದಿ ರೇಣುಕಾರಾಜ್ ಮಾತನಾಡಿ, ಸೂಕ್ಷ್ಮ ನೀರಾವರಿ ಯೋಜನೆ ಅಡಿಯಲ್ಲಿ ರೈತ ಫಲಾನುಭವಿಗಳಿಗೆ ಸಿಗುವ ಸಹಾಯಧನ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ನವ್ಯ, ಶಿವಪ್ಪ ಬಾರಿಗಿಡದ್ ಸೇರಿದಂತೆ ರೈತರು ಹಾಗೂ ಸಿಬ್ಬಂದಿ.ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 