ಸವಿತಾ ಮಹರ್ಷಿ ಜಯಂತಿ : ಪೂರ್ವಸಿದ್ಧತಾ ಸಭೆ
Savita Maharshi Jayanti: Preparatory meeting
ಗದಗ 13: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ಸವಿತಾ ಮಹರ್ಷಿ ಜಯಂತಿ ಕುರಿತು ಪೂರ್ವಸಿದ್ಧತಾ ಸಭೆಯು ಜರುಗಿತು. ಸವಿತಾ ಮಹರ್ಷಿ ಜಯಂತಿಯ ದಿನಾಂಕವನ್ನು ಜಿಲ್ಲಾಡಳಿತ ಹಾಗೂ ಸಮಾಜದವರು ಸಮಾಲೋಚಿಸಿದ ನಂತರ ನಿಗದಿಪಡಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ತಾಲೂಕು ಮಟ್ಟದಲ್ಲಿಯೂ ಸವಿತಾ ಮಹರ್ಷಿ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಎಸ್.ಎಸ್ ಎಲ್ ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಉಪನ್ಯಾಸಕರ ನೇಮಕ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ವಾರ್ತಾ ಮತ್ತು ಸಾ.ಸಂ.ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 