ಸಾವಿತ್ರಿಬಾಯಿ ಪುಲೆ ಜಯಂತಿ ಜನ್ಮದಿನ ಆಚರಣೆ
Savitribai Pule Jayanti birthday celebration
ತಾಳಿಕೋಟೆ 05: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಸಾವಿತ್ರಿಬಾಯಿ ಪುಲೆ ಅವರು ಜನವರಿ 3, 1831 ರಂದು ಮಹಾರಾಷ್ಟ್ರ ರಾಜ್ಯದ ಸತಾರಾ ಜಿಲ್ಲೆಯ ನೈಗಾಂವ್ ಗ್ರಾಮದಲ್ಲಿ ಜನಿಸಿದರು. ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ ಹಾಗೂ ಮಹಾನ್ ಸಮಾಜ ಸುಧಾರಕಿಯಾಗಿ ಪ್ರಸಿದ್ಧರಾಗಿದ್ದಾರೆ. ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ.ಎಸ್.ಎಂ.ಸಜ್ಜನ ಅವರು ಮಾತನಾಡಿ ಸಾವಿತ್ರಿಬಾಯಿ ಪುಲೆ ಅವರು ಭಾರತದ ಪ್ರಥಮ ಮಹಿಳಾ ಶಿಕ್ಷಕಿ, ಸಮಾಜ ಸುಧಾರಕಿ ಹಾಗೂ ಮಹಿಳಾ ಶಿಕ್ಷಣದ ಮುಂಚೂಣಿ ನಾಯಕಿ. ಮಹಿಳೆಯರು ಮತ್ತು ದಲಿತರ ಶಿಕ್ಷಣಕ್ಕಾಗಿ ತಮ್ಮ ಜೀವನವನ್ನೇ ಸಮರ್ಿಸಿದ ಮಹಾನ್ ವ್ಯಕ್ತಿತ್ವವೇ ಬಾಲ್ಯದಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದ ಅವರು, ವಿವಾಹದ ನಂತರ ಶಿಕ್ಷಣ ಪಡೆಯಲು ಆರಂಭಿಸಿದರು. 1840ರಲ್ಲಿ ಮಹಾತ್ಮ ಜ್ಯೋತಿಬಾ ಪುಲೆ ಅವರೊಂದಿಗೆ ವಿವಾಹವಾಯಿತು. ಜ್ಯೋತಿಬಾ ಪುಲೆ ಅವರ ಪ್ರೇರಣೆಯಿಂದ ಸಾವಿತ್ರಿಬಾಯಿ ಓದು ಬರಹ ಕಲಿತು ಶಿಕ್ಷಕಿಯಾಗಿದರು. ನಂತರ ಪುಣೆ ನಗರದಲ್ಲಿ ಶಿಕ್ಷಕ ತರಬೇತಿಯನ್ನು ಪೂರ್ಣಗೊಳಿಸಿದರು.
ಭಾರತದ ಮೊದಲ ಮಹಿಳಾ ಶಿಕ್ಷಕಿ ಮಹಿಳೆಯರಿಗೆ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಹೊಸ ಬೆಳಕನ್ನು ತಂದರು. 1848 ರಲ್ಲಿ ಮಹಾತ್ಮ ಜ್ಯೋತಿಬಾ ಪುಲೆ ಅವರೊಂದಿಗೆ ಪುಣೆಯಲ್ಲಿ ಬಾಲಕಿಯರಿಗಾಗಿ ಭಾರತದ ಮೊದಲ ಶಾಲೆಯನ್ನು ಆರಂಭಿಸಿದರು.ದಲಿತ ಮತ್ತು ಹಿಂದುಳಿದ ವರ್ಗಗಳ ಶಿಕ್ಷಣ,ಶೂದ್ರರು, ಅತಿಶೂದ್ರರು ಹಾಗೂ ದಲಿತರ ಶಿಕ್ಷಣಕ್ಕಾಗಿ ಅನೇಕ ಶಾಲೆಗಳನ್ನು ಸ್ಥಾಪಿಸಿದರು. 1897 ರಲ್ಲಿ ಪುಣೆಯಲ್ಲಿ ಪ್ಲೇಗ್ ರೋಗ ಹರಡಿದ್ದಾಗ ರೋಗಿಗಳ ಸೇವೆ ಮಾಡಿ ಮಾನವೀಯತೆ ತೋರಿದರು.ಸಾಹಿತ್ಯ ಸಾಧನೆಕಾವ್ಯಫುಲೆ ಮತ್ತು ಬಾವನ್ ಕಾಶಿ ಸುಬೋಧ್ ರತ್ನಾಕರ ಎಂಬ ಕೃತಿಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದರು. ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರು ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಸಿಬಿಎಸ್ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಟಿ.ವ್ಹಿ ಶೆಟ್ಟಿ, ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 