ಏ. 12ರಂದು ಸವ್ಯಸಾಚಿ ಗ್ರಂಥ ಬಿಡುಗಡೆ ಸಮಾರಂಭ
Savyasachi Granth release ceremony on April 12
ಅಥಣಿ 10: ಅರವಿಂದರಾವ ದೇಶಪಾಂಡೆ ಅವರ ಸಾಮಾಜಿಕ, ಸಂಘಟನಾ ಹಾಗೂ ಶೈಕ್ಷಣಿಕ ಸೇವೆಯನ್ನು ಮನಗಂಡು ಎಪ್ರಿಲ್ 12 ರಂದು ಜೆ ಎ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಅವರ ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ಸವ್ಯಸಾಚಿ ಗ್ರಂಥ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆ ಎ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಡಾ ರಾಮ ಕುಲಕರ್ಣಿ ಹೇಳಿದರು.
ಅವರು ಅಥಣಿ ಪಟ್ಟಣದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಕನೇರಿ ಮಠದ ಶ್ರೀ ಅದೃಶ್ಯಕಾಡಸಿದ್ದೇಶ್ವರ ಮಹಾಸ್ವಾಮಿಗಳು, ಅಯೋಧ್ಯಾ ಶ್ರೀರಾಮಲಲ್ಲಾ ಮೂರ್ತಿಯ ಶಿಲ್ಪಿ ಡಾ ಅರುಣ ಯೋಗಿರಾಜ, ಆರ್ ಎಸ್ ಎಸ್ ಪ್ರಮುಖ ಸುರೇಶ ಜೋಶಿ (ಭಯ್ಯಾಜಿ), ವಿಮೋಚನಾ ಸಂಸ್ಥೆಯ ಅಧ್ಯಕ್ಷ ಬಿ ಎಲ್ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತ ಇರುತ್ತಾರೆ ಎಂದರು.
ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿಯಲ್ಲಿ ಶೈಕ್ಷಣಿಕವಾಗಿ, ಸಂಘಟನಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಸೇವೆ ಸಲ್ಲಿಸಿದ ಅರವಿಂದರಾವ ದೇಶಪಾಂಡೆ ಅವರ ಸೇವೆಗೆ ಪ್ರತ್ಯುತ್ತರವಾಗಿ ಸಮಾನ ಮನಸ್ಕರೆಲ್ಲ ಸೇರಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಎಲ್ಲರೂ ಸೇರಿ ಯಶಸ್ವಿಗೊಳಿಸಲು ಎಲ್ಲರಿಗೂ ಸ್ವಾಗತ ಎಂದರು.
ಸುದ್ದಿಗೋಷ್ಠಿಯಲ್ಲಿ ನ್ಯಾಯವಾದಿ ಬಿ.ಎಲ್.ಪಾಟೀಲ, ಅನೀಲ ದೇಶಪಾಂಡೆ (ಹಿಡಕಲ್), ಸುಹಾಸ ದಾತಾರ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 