ಶಾಲಾ ವಿಶೇಷ ದಾಖಲಾತಿ ಆಂದೋಲನ
ಲೋಕದರ್ಶನ ವರದಿ
ಬೈಲಹೊಂಗಲ, 26: ರಾಜ್ಯದ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಹೊಂದಿ ಕಲಿಯುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸರಕಾರದಿಂದ ನೀಡಲಾಗುವ ಉಚಿತ ಪಠ್ಯ ಪುಸ್ತಕ, ಮಧ್ಯಾಹ್ನದ ಬಿಸಿಊಟ, ಕ್ಷೀರ ಭಾಗ್ಯ, ಶೂ ಸಾಕ್ಸ್, ಸಮವಸ್ತ್ರ, ವಿದ್ಯಾಥರ್ಿ ವೇತನ ಸೇರಿದಂತೆ ಅನೇಕ ಸೌಲತ್ತುಗಳ ಬಗ್ಗೆ ಶಿಕ್ಷಕರು ಮನೆ ಮನೆಗೆ ಭೇಟಿ ನೀಡಿ ಪಾಲಕರಿಗೆ ಕರ ಪತ್ರ ಹಂಚಿ ತಿಳಿಸಿ ಹೇಳಿ ಸರಕಾರಿ ಶಾಲೆಗಳಿಗೆ ಮಕ್ಕಳ ದಾಖಾಲಾತಿ ಹೆಚ್ಚಾಗುವಂತೆ ಶ್ರಮಿಸಬೇಕು ಎಂದು ಸವದತ್ತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರು ಹೇಳಿದರು.
ಅವರು ತಾಲೂಕಿನ ಕೆಂಚರಾಮನಹಾಳ ಹಾಗೂ ಯಡಹಳ್ಳಿ ಗ್ರಾಮಗಳಲ್ಲಿ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ, ಉದರ್ು ಪ್ರಾಥಮಿಕ ಶಾಲೆಗಳ ಸಹಯೋಗದಲ್ಲಿ ನಡೆದ ವಿಶೇಷ ದಾಖಾತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ,ಗುಣ ಮಟ್ಟದ ಶಿಕ್ಷಣ ಒದಗಿಸುವಲ್ಲಿ ಶಿಕ್ಷಕರ ಸೇವಾ ಮನೋಭಾವ ಅಗತ್ಯವಾಗಿದೆ ಎಂದರು.
ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ವೈ.ಎಮ್.ಶಿಂಧೆ, ಬಿಆರ್ಪಿ ಬಿ.ಐ.ಚಿನಗುಡಿ, ಸಿಆರ್ಪಿ ವಿ.ಜಿ.ಚಂದರಗಿ, ಮುಖ್ಯ ಶಿಕ್ಷಕ ಎಮ್.ಜಿ.ಕಮ್ಮಾರ, ಡಿ.ಎಮ್.ದಾಮನೇಮಠ, ಎಸ್.ಐ.ಕಮತಗಿ ಹಾಗೂ ಮೂರು ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು. ಶಾಲಾ ಮಕ್ಕಳು ಜಾಗೃತಿ ಮೂಡಿಸುವ ಘೋಷಣಾ ಫಲಕಗಳನ್ನು ಪ್ರದಶರ್ಿಸುತ್ತ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಎಂದು ಘೋಷಣೆಗಳನ್ನು ಕೂಗುತ್ತ ಆಂದೋಲನದಲ್ಲಿ ಸಾಗಿ ಗಮನ ಸೆಳೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 