ಶಾಲಾ ವಾರ್ಷಿಕೋತ್ಸವ ಮಕ್ಕಳ ಪ್ರತಿಭೆಗೆ ಉತ್ತಮ ವೇದಿಕೆ
School anniversary is a good platform for children's talents
ಹೂವಿನಹಡಗಲಿ 01: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಗಳು ಮಕ್ಕಳ ಪ್ರತಿಭೆಯನ್ನು ಹೊರ ತರಲು ಸಹಕಾರಿ. ಶಾಲೆಯಲ್ಲಿನ ಪ್ರತಿ ಪುರಸ್ಕರಿಸುವಂತಹ ಉತ್ತಮ ಕಾರ್ಯ ನಡೆಯುತ್ತಿದೆ ಎಂದು ಸಂಸ್ಥೆ ಗೌರವಾಧ್ಯಕ್ಷ ಹೆಚ್.ಎಂ.ಬೆಟ್ಟಯ್ಯ ಹೇಳಿದರು. ಪಟ್ಟಣದ ಮಲ್ಲಿಗೆ ವಿದ್ಯಾಸಂಸ್ಥೆ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ 26ನೇ ಶಾಲಾ ವಾರ್ಷಿಕೋತ್ಸವದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾಭಿವೃದ್ದಿಗೆ ಅನುವಾಗುವಂತೆ ಪೋಷಕರು ಶಿಕ್ಷಕರ ಜತೆ ಒಡನಾಟ ಇಟ್ಟುಕೊಳ್ಳಬೇಕೆಂದರು.ಡಾ.ಉಮರ್ ಮಾತನಾಡಿದರು. ವಿದ್ಯಾಸಂಸ್ಥೆ ಅದ್ಯಕ್ಷ ಕೆ.ಮೆಹಬೂಬ್ ಸುಬಾನ್ ಪ್ರಾಸ್ತಾವಿಕ ಮಾತನಾಡಿದರು. ಸಭೆಯಲ್ಲಿ ದೈಹಿಕ ಶಿಕ್ಷಣ ಪರಿ ವೀಕ್ಷಕ ರಫಿ ಅಹ್ಮದ್ ಖವಾಸ್, ಡಾ. ಉಮರ್, ಮಲ್ಲಿಗೆ ಕಲಾ ಸಂಸ್ಥೆ ಅದ್ಯಕ್ಷ ಎಲ್.ಖಾದರ್ ಬಾಷಾ, ಸಿಆರ್ ಪಿ. ವಿರೇಶ, ಖಲಂದರ್, ಶಿಕ್ಷಕ ಶೇಕ ಅಹ್ಮದ್, ಸಂಸ್ಥೆ ಕಾರ್ಯ ದರ್ಶಿ ಎಲ್.ಅಕ್ಬರ್, ನಿರ್ದೇಶಕ ರಾದಅರಿಪ್ ಬಾನು, ಹಸೀನಾ, ರಹಮಾನ್ ಸಾಬ್ ಇದ್ದರು. ಮು.ಗು. ಪರ್ವಿನ್ ತಾಜ್ ಸ್ವಾಗತಿಸಿದರು. ಶಿಕ್ಷಕಿ ಕೊಟ್ರಮ್ಮ ವಂದಿಸಿದರು. ನಂತರ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮನಸೂರೆ ಗೊಂಡಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 