ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಶಾಲಾ ಬಸ್ ಗಳಿಗೆ ಚಾಲನೆ
School buses launched for students' education
ರಾಯಬಾಗ 18: ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲು ಸುಸಜ್ಜಿತ ಎರಡು ಹೊಸ ಶಾಲಾ ಬಸ್ ಪ್ರಾರಂಭಿಸಲಾಗಿದೆ ಎಂದು ಮಾಜಿ ಸಂಸದ, ಎಸ್.ಪಿ.ಎಮ್.ಚೇರಮನ್ ಅಮರಸಿಂಹ ಪಾಟೀಲ ಹೇಳಿದರು.ಬುಧವಾರ ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಆರಿ್ವ.ಆರ್. ಪ್ರೌಢಶಾಲೆ ಆವರಣದಲ್ಲಿ ಹೊಸ ಶಾಲಾ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು.ಸಂಸ್ಥೆ ಕಾರ್ಯದರ್ಶಿ ಶಶಿಕಲಾ ಸಿಂಗಾಡಿ ಮಾತನಾಡಿ, ಅಭಾಜಿಯವರು ಕಟ್ಟಿದ ಈ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದಿದೆ, ಇಂದು ಯುಕೆಜಿ ಯಿಂದ ಸ್ನಾತಕೋತ್ತರ ಪದವಿ ವರೆಗೆ ಎಲ್ಲ ವಿಭಾಗಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿಭಾ ವಸಂತರಾವ ಪಾಟೀಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಸುರಕ್ಷಿತವಾಗಿ ಹೋಗಿ ಬರಲು ಕ್ಯಾಮೆರಾ ಮತ್ತು ಜಿ.ಪಿ.ಎಸ್ ಅಳವಡಿಸಿರುವ ಈ ಬಸ್ ಗಳನ್ನು ಪ್ರಾರಂಭಿಸಲಾಗಿದೆ, ವಿದ್ಯಾರ್ಥಿಗಳ ಪಾಲಕರು ಮತ್ತು ಶಾಲೆ ಸಿಬ್ಬಂದಿಗಳು ತಮ್ಮ ವಿದ್ಯಾರ್ಥಿಗಳ ಚಲನವಲನ ಗಮನಿಸಬಹುದಾಗಿದೆ ಎಂದು ತಿಳಿಸಿದರು.ಸಂಸ್ಥೆಯ ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಶಶಿಕಲಾ ಸಿಂಗಾಡಿ ಹಾಗೂ ಸಂಸ್ಥೆಯ ಎಲ್ಲ ಶಾಲಾ, ಕಾಲೇಜುಗಳ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 