ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಶಾಲಾ ಬಸ್ ಗಳಿಗೆ ಚಾಲನೆ
School buses launched for students' education
ರಾಯಬಾಗ 18: ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲು ಸುಸಜ್ಜಿತ ಎರಡು ಹೊಸ ಶಾಲಾ ಬಸ್ ಪ್ರಾರಂಭಿಸಲಾಗಿದೆ ಎಂದು ಮಾಜಿ ಸಂಸದ, ಎಸ್.ಪಿ.ಎಮ್.ಚೇರಮನ್ ಅಮರಸಿಂಹ ಪಾಟೀಲ ಹೇಳಿದರು.ಬುಧವಾರ ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಆರಿ್ವ.ಆರ್. ಪ್ರೌಢಶಾಲೆ ಆವರಣದಲ್ಲಿ ಹೊಸ ಶಾಲಾ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು.ಸಂಸ್ಥೆ ಕಾರ್ಯದರ್ಶಿ ಶಶಿಕಲಾ ಸಿಂಗಾಡಿ ಮಾತನಾಡಿ, ಅಭಾಜಿಯವರು ಕಟ್ಟಿದ ಈ ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದಿದೆ, ಇಂದು ಯುಕೆಜಿ ಯಿಂದ ಸ್ನಾತಕೋತ್ತರ ಪದವಿ ವರೆಗೆ ಎಲ್ಲ ವಿಭಾಗಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿಭಾ ವಸಂತರಾವ ಪಾಟೀಲ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ಸುರಕ್ಷಿತವಾಗಿ ಹೋಗಿ ಬರಲು ಕ್ಯಾಮೆರಾ ಮತ್ತು ಜಿ.ಪಿ.ಎಸ್ ಅಳವಡಿಸಿರುವ ಈ ಬಸ್ ಗಳನ್ನು ಪ್ರಾರಂಭಿಸಲಾಗಿದೆ, ವಿದ್ಯಾರ್ಥಿಗಳ ಪಾಲಕರು ಮತ್ತು ಶಾಲೆ ಸಿಬ್ಬಂದಿಗಳು ತಮ್ಮ ವಿದ್ಯಾರ್ಥಿಗಳ ಚಲನವಲನ ಗಮನಿಸಬಹುದಾಗಿದೆ ಎಂದು ತಿಳಿಸಿದರು.ಸಂಸ್ಥೆಯ ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಶಶಿಕಲಾ ಸಿಂಗಾಡಿ ಹಾಗೂ ಸಂಸ್ಥೆಯ ಎಲ್ಲ ಶಾಲಾ, ಕಾಲೇಜುಗಳ ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 