ಹೈ ವೋಲ್ಟೇಜ್ ವಿದ್ಯುತ್ ತಂತಿಯಿಂದ ಶಾಲಾ ಮಕ್ಕಳು ಆತಂಕದಲ್ಲಿ : ರಫೀಕ ಡಿ. ಕೆ.
School children are worried about high voltage electric wires: Rafeek D. K.
ಯರಗಟ್ಟಿ 25 : ಪಟ್ಟಣದ ಅಂಬೇಡ್ಕರ್ ಶಾಲಾ ಮೈದಾನದಲ್ಲಿ 11 ಕೆ.ವಿ ವಿದ್ಯುತ್ ತಂತಿ ಹಾದು ಹೋಗಿದೆ. ಇದರಿಂದ ಶಾಲಾ ಮಕ್ಕಳು ಆತಂಕದಲ್ಲಿ ಜೀವನ ಸಾಗಿಸಬೇಕಿದೆ ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ರಫೀಕ ಡಿ. ಕೆ. ಆರೋಪಿಸಿದ್ದಾರೆ.
ಈ ಶಾಲೆಯ ಮೇಲೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದು ಹೋಗಿವೆ. ಇವುಗಳನ್ನು ಬದಲಿಸುವಂತೆ ದೂರು ನೀಡಿದ್ದರೂ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಶಾಲೆಯ ಮೇಲೆ ಹೋದರೆ ತಲೆಗೆ ತಗುಲುವಂತೆ ವಿದ್ಯುತ್ ತಂತಿಗಳಿವೆ. ಮಳೆ ಬಂದರೆ ಎಲ್ಲಿ ಶಾಲೆಯ ಗೋಡೆಗಳಿಗೆ ವಿದ್ಯುತ್ ಪ್ರವಹಿಸಿ ಅನಾಹುತ ಸಂಭವಿಸುತ್ತದೆಯೊ ಎಂಬ ಭಯ ಇಲ್ಲಿನ ಮಕ್ಕಳು. ಕೆಲ ಎರಡು ದಿನಗಳ ಹಿಂದೆ ಮೇನ್ ಲೈನ್ ಕಟ್ಟಾಗಿ ಹೋಗಿತ್ತು. ಇಷ್ಟಾದರೂ ಅಧಿಕಾರಿಗಳು ತಂತಿ ಸ್ಥಳಾಂತರಿಸದೆ ಬೇಜವಾಬ್ದಾರಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕೂಡಲೇ ವಿದ್ಯುತ್ ತಂತಿಗಳನ್ನು ಸ್ಥಳಾಂತರಿಸಬೇಕು ಎಂದು ಶಿಕ್ಷಣ ಸಂಯೋಜಕ ಎಂ. ಬಿ. ಕಡಕೋಳ, ಸಿ.ಆರ್.ಪಿ ವಸಂತ ಬಡಿಗೇರ,ಶಾಲಾ ಪ್ರಧಾನ ಗುರುಗಳಾದ ಪಿ. ಎಂ. ತಳವಾರ, ಶಿಕ್ಷಕರಾದ ಬಿ.ಆರ್.ಮಲ್ಲೂರ, ಎಚ್.ಎ.ಮುಗಜೋಳ, ಡಿ. ಎಚ್. ಭಜಂತ್ರಿ, ಆರ್.ಎ.ಗಂಗೂರ, ಸಂತೋಷ ಚನ್ನಮೆತ್ರಿ, ಫಾರೂಕ್ ಅತ್ತಾರ, ಹಣಮಂತ ಉದ್ದಪ್ಪನವರ ಹಸನ ಹುಸೇನಾಯ್ಕರ, ಹಸನ ಶೀಗಿಹಳ್ಳಿ, ಸೋಮು ರೈನಾಪೂರ ಹಾಗೂ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಅಂಬೇಡ್ಕರ್ ನಗರದ ನಿವಾಸಿಗಳು ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 