ಶಾಲಾ ಮಕ್ಕಳಿಂದ ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ

ಶಾಲಾ ಮಕ್ಕಳಿಂದ ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ  School children perform a hoe puja for the new school building


ಯಮಕನಮರಡಿ22 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀಯುತ ರಾಹುಲ್ ಅಣ್ಣಾ ಜಾರಕಿಹೊಳಿ ಅವರ  ಆದೇಶದ ಮೇರೆಗೆ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕರಗುಪ್ಪಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕರಗುಪ್ಪಿ ಈ ಶಾಲೆಗೆ ಪಿ ಆರ್ ಇ ಇಲಾಖೆಯಿಂದ ಒಟ್ಟು 85 ಲಕ್ಷ ಮಂಜೂರಾಗಿದ್ದು 5 ಶಾಲಾ ಕೊಠಡಿಗಳ ಅಡಿಗಲ್ಲು ಸಮಾರಂಭ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು.   

ಇದೇ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶೈಕ್ಷಣಿಕ ಆಪ್ತಸಾಯಕರಾದ ಶ್ರೀ ಜಂಗ್ಲಿ ಸಾಬ್ ನಾಯಕ್ ಶ್ರೀ ಲಗಮಣ್ಣ ಪನಗುದ್ದಿ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು ಸರ್ವ ಸದಸ್ಯರು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಊರಿನ ಹಿರಿಯರು ಹಾಗೂ ಗುತ್ತಿಗೆದಾರರು ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಮುದ್ದು ವಿದ್ಯಾರ್ಥಿಗಳು ಇದೇ ಸಂದರ್ಭದಲ್ಲಿ ಭಾಗವಹಿಸಿದ್ದರು.