ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ Science exhibition to foster a scientific temper among students

ರಾಯಬಾಗ 27 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಾಯ ಮಾಡುತ್ತವೆ ಎಂದು ಆದರ್ಶ ಶಿಕ್ಷಣ ಸಂಸ್ಥೆ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು. ಶನಿವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮ ಬಾಜೀರಾವ ಮಗದುಮ್ಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಹಮ್ಮಿಕೊಂಡಿದ್ದ ಪಠ್ಯಾಧಾರಿತ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. 43 ವಿದ್ಯಾರ್ಥಿಗಳು ಸ್ವತಃ ತಾವು ತಯಾರಿಸಿದ ವಸ್ತುಗಳನ್ನು ವಿವರಣೆ ನೀಡುತ್ತ ಪ್ರದರ್ಶನ ಮಾಡಿದ್ದರು. ಮುಖ್ಯಾಧ್ಯಾಪಕ ಅರುಣ ಸಲಗರೆ, ವಿಜ್ಞಾನ ಶಿಕ್ಷಕ ವಿ.ಡಿ. ಗುರವ, ಕೆ.ಬಿ.ಕಾಂಬಳೆ, ಡಿ.ಆರ್‌.ಬೆಂಡೆ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.