2020 ರ ವಿಶ್ವ ಆಹಾರ ಪ್ರಶಸ್ತಿಗೆ ವಿಜ್ಞಾನಿ ರತ್ತನ್ ಲಾಲ್ ಆಯ್ಕೆ
ಭಾರತ ಸಂಜಾತ ಅಮೆರಿಕದ ಮಣ್ಣಿನ ವಿಜ್ಞಾನಿ ರತ್ತನ್ ಲಾಲ್ ಅವರನ್ನು ಈ ವರ್ಷದ ವಿಶ್ವ ಆಹಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಹಾರ ಉತ್ಪಾದನೆ ಹೆಚ್ಚಳಕ್ಕೆ ಪಾಕೃತಿ ಸಂಪನ್ಮೂಲಗಳ ರಕ್ಷಣೆಯ ಜತೆಗೆ ಹವಾಮಾನ ಬದಲಾವಣೆ ತಗ್ಗಿಸುವಲ್ಲಿ ಮಣ್ಣಿನ ಪ್ರಾಮುಖ್ಯತೆಯ ಬಗ್ಗೆ ಇವರ ಪ್ರಮುಖ ಸಂಶೋಧನೆಗೆ ಈ ಪ್ರಶಸ್ತಿ ನೀಡಲಾಗಿದೆ. ಐದು ದಶಕಗಳಿಗೂ ಹೆಚ್ಚು ಕಾಲ ನಾಲ್ಕು ಖಂಡಗಳಲ್ಲಿನ ಇವರ ಕೊಡುಗೆ ಗುರುತಿಸಿ ನೀಡಲಾಗಿರುವ ಈ ಪ್ರಶಸ್ತಿ 2.5 ಲಕ್ಷ ಡಾಲರ್ ಮೊತ್ತದ್ದಾಗಿದೆ. ಭಾರತ ಮೂಲದ ಲಾಲ್, ಅಮೆರಿಕದ ಪ್ರಜೆಯಾಗಿದ್ದಾರೆ.
ಮಣ್ಣಿನ ಸಂರಕ್ಷಣಾ ವಿಧಾನಗಳ ಮೂಲಕ 50 ಕೋಟಿ ರೈತರ ಜೀವನ ಸುಧಾರಿಸಬಹುದಾಗಿದೆ, 2 ಶತಕೋಟಿಗೂ ಹೆಚ್ಚು ಜನರಿಗೆ ಆಹಾರ ಮತ್ತು ಪೌಷ್ಠಿಕಾಂಶ ಭದ್ರತೆ ಒದಗಿಸುವ ಜೊತೆಗೆ ಲಕ್ಷಾಂತರ ಹೆಕ್ಟೇರ್ ಪ್ರದೇಶದ ಫಲವತ್ತತೆ ಕಾಪಾಡಿಕೊಳ್ಳಬಹುದಾಗಿದೆ ಎಂದು ಅವರು ತೋರಿಸಿಕೊಟ್ಟಿದ್ದರು.ಪ್ರಸ್ತುತ ಲಾಲ್ ಅವರು ಓಹಿಯೋ ವಿಶ್ವವಿದ್ಯಾಲಯದ ಇಂಗಾಲ ನಿರ್ವಹಣೆ ಕೇಂದ್ರದ ಸಂಸ್ಥಾಪಕರು ಮತ್ತು ಮಣ್ಣು ವಿಜ್ಞಾನದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 