ಹಾವೇರಿ: ಜೂನ್ 12 ಇದೇ ಜೂನ್ 18 ರಂದು ನಡೆಯುವ ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ವಿಷಯದ ಪರೀಕ್ಷೆಯಿಂದ ಯಾವುದೇ ವಿದ್ಯಾಥರ್ಿ ಮಾಹಿತಿಯ ಕೊರತೆ ಸಾರಿಗೆ ವ್ಯವಸ್ಥೆಯ ಅನಾನುಕೂಲತೆಯಿಂದ ಪರೀಕ್ಷೆ ಬರೆಯಲಾಗದೇ ಮನೆಯಲ್ಲಿ ಉಳಿಯಬಾರದು. ತಮ್ಮ ತಮ್ಮ ಕಾಲೇಜುಗಳ ಪ್ರತಿಯೊಬ್ಬ ವಿದ್ಯಾಥರ್ಿಯ ಸಂಪಕರ್ಿಸಿ ಪರೀಕ್ಷೆ ಬರೆಯಲು ವ್ಯವಸ್ಥೆ ಕೈಗೊಳ್ಳಬೇಕು ಎಂದು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರಿಗೆ ಅಪರ ಜಿಲ್ಲಾಧಿಕಾರಿ ಎಸ್ ಯೋಗೇಶ್ವರ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ದ್ವಿತೀಯ ಪಿ.ಯು.ಸಿ ಇಂಗ್ಲಿಷ್ ವಿಷಯದ ಪರೀಕ್ಷಾ ಪೂರ್ವ ಸಿದ್ದತೆ ಸಭೆಯ ಅಧ್ಯಕ್ಷತೆವಹಿಸಿ ಕೇಂದ್ರವಾರು ಕೈಗೊಂಡಿರುವ ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು ಸಾಮಾಜಿಕ ಅಂತರದ ಜೊತೆಗೆ ಪ್ರತಿ ವಿದ್ಯಾಥರ್ಿಗೂ ಮಾಸ್ಕ್ ಹಾಗೂ ಸ್ಕ್ರೀನಿಂಗ್ ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಸಕರ್ಾರದ ಎಸ್.ಒ.ಪಿ ಮಾನದಂಡದಂತೆ ಪರೀಕ್ಷೆ ನಡೆಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಒಂದು ಕೊಠಡಿಯಲ್ಲಿ ಕೇವಲ 24 ವಿದ್ಯಾಥರ್ಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಬೇಕು, ಕೊಠಡಿ ಪ್ರವೇಶಕ್ಕೂ ಮುನ್ನ ಪ್ರತಿಯೊಬ್ಬರಿಗೂ ಜ್ವರ ತಪಾಸಣೆ ನಡೆಸಬೇಕು, ಸ್ಯಾನಿಟೈಜರ್ನಿಂದ ಕೈತೊಳೆಯಬೇಕು, ಪ್ರತಿ ವಿದ್ಯಾಥರ್ಿಯು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಬೇಕು, ಜ್ವರದ ಲಕ್ಷಣ ಇರುವ ವಿದ್ಯಾಥರ್ಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು, ಎಲ್ಲ ಕೊಠಡಿಗಳನ್ನು ಸ್ಯಾನಿಟೈಜೇಶನ್ ಮಾಡಬೇಕು. ಈ ಎಲ್ಲ ಸಿದ್ದತೆಗಳನ್ನು ಆಯಾ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪ್ರಾಚಾರ್ಯರು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಯಾವುದೇ ಲೋಪವಾಗಬಾರದು ಎಂದು ಸೂಚನೆ ನೀಡಿದರು.
ವಿದ್ಯಾಥರ್ಿಗಳಿಗೆ ತಮ್ಮ ತಮ್ಮ ಹಳ್ಳಿಗಳಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಸುಗಮವಾಗಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಾಯುವ್ಯ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಬಸ್ ವ್ಯವಸ್ಥೆ ಕಲ್ಪಿಸಬೇಕು, ಸಕರ್ಾರ ವಿದ್ಯಾಥರ್ಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ, ವಿದ್ಯಾಥರ್ಿಗಳು ಹಳೆಯ ಸ್ಮಾಟರ್್ ಪಾಸ್ ಅಥವಾ ಪರೀಕ್ಷಾ ಪ್ರವೇಶ ಪತ್ರವನ್ನು ತೊರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು, ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪೋಲೀಸ್ ನಿಯೋಜಿಸಲಾಗುವುದು, ತಪಾಸಣೆಗೆ ಆರೋಗ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗುವುದು, ಪ್ರಶ್ನೆ ಪತ್ರಿಕೆ ಸಾಗಾಣಿಕೆಗೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗುವುದು, ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲು ನಿಷೇಧಿತ ಪ್ರದೇಶ ಎಂದು ಗುರುತಿಸಲಾಗುವುದು, ಝರಾಕ್ಷ ಅಂಗಡಿ ಬಂದ್ ಮಾಡಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಸ್ಕ್ರೀನಿಂಗ್ ಕಾರ್ಯಕ್ಕಾಗಿ ಪರೀಕ್ಷಾ ಕೇಂದ್ರಕ್ಕೆ ಬೆಳೆಗ್ಗೆ 9ಗಂಟೆಗೆ ವಿದ್ಯಾಥರ್ಿಗಳು ಹಾಜರಾಗಲು ಸೂಚನೆ ನೀಡಬೇಕು, ಸ್ಕ್ರೀನಿಂಗ್, ಸಾಮಾಜಿಕ ಅಂತರ, ಸ್ಯಾನಿಟೈಜೇಶನ್, ಮಾಸ್ಕ್ ವಿತರಣೆಗೆ ವಿವಿಧ ಉಪನ್ಯಾಸಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಬೇಕು, ಎಲ್ಲರಿಗೂ ಗುರುತಿನ ಚೀಟಿ ನೀಡಬೇಕು, ಅಂಥವರಿಗೆ ಮಾತ್ರ ಪರೀಕ್ಷಾ ಆವರಣದಲ್ಲಿ ಅವಕಾಶ ಕಲ್ಪಿಸಬೇಕೆಂದು ಸೂಚನೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದರ್ೇಶಕ ನಿರಂಜನ ಅವರು ಮಾಹಿತಿ ನೀಡಿ, ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ವಿಷಯದ ಪರೀಕ್ಷೆ ಜೂನ್ 18ರ ಗುರುವಾರ ಬೆಳೆಗ್ಗೆ 10.15ರಿಂದ 1.30ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 129 ಪದವಿ ಪೂರ್ವ ಕಾಲೇಜುಗಳಿದ್ದು ಹೊರ ಜಿಲ್ಲೆಯ 902 ವಿದ್ಯಾಥರ್ಿಗಳು ಸೇರಿದಂತೆ 13,955 ವಿದ್ಯಾಥರ್ಿಗಳು ದ್ವಿತೀಯ ಪಿ.ಯು.ಸಿ ಇಂಗ್ಲಿಷ್ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಸವಣೂರ 1, ಶಿಗ್ಗಾಂವ, ಬ್ಯಾಡಗಿ ತಲಾ 2, ಹಾನಗಲ್ಲ 3 ಹಾಗೂ ಹಾವೇರಿ, ಹಿರೇಕೆರೂರ ತಾಲೂಕಿನಲ್ಲಿ ತಲಾ 4 ಮತ್ತು ರಾಣೆಬೆನ್ನೂರಿನಲ್ಲಿ 7 ಒಳಗೊಂಡಂತೆ ಜಿಲ್ಲೆಯಲ್ಲಿ 23 ಪರೀಕ್ಷಾ ಕೇಂದ್ರಗಳು ತೆರೆಯಲಾಗಿದೆ. ಕೋವಿಡ್ ಎಸ್.ಒ.ಪಿ ಮಾರ್ಗಸೂಚಿಯಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಪಾರದರ್ಶಕ ಹಾಗೂ ನಕಲು ರಹಿತ ಪರೀಕ್ಷೆ ನಡೆಸಲು ಕೈಗೊಂಡಿರುವ ಸಿದ್ದತೆಗಳನ್ನು ಸಭೆಯಲ್ಲಿ ವಿವರಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೋಲೀಸ್ ವರಿಷ್ಟಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ ಅವರು ಪರೀಕ್ಷಾ ಕಾರ್ಯಕ್ಕೆ ಪೋಲೀಸ್ ಬಂದೋಬಸ್ತ್ ಕುರಿತಂತೆ ಚಚರ್ಿಸಿದರು. ಸಭೆಯಲ್ಲಿ ವಿವಿಧ ಕಾಲೇಜ ಪ್ರಾಚಾರ್ಯರು, ಪರೀಕ್ಷಾ ಕೇಂದ್ರದ ಅಧಿಕ್ಷಕರು ಉಪಸ್ಥಿತರಿದ್ದರು