ಬೀಜದ ಪ್ಯಾಕೆಟ್ಗಳ ವಿತರಣೆಯಲ್ಲಿ ಬಾರಿ ಅವ್ಯವಹಾರ: ಸವಿತಾ
ಲೋಕದರ್ಶನವರದಿ
ಬ್ಯಾಡಗಿ೧೨: ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ವಿತರಣೆ ಮಾಡಲಿರುವ ವಿವಿಧ ಬೀಜದ ಪ್ಯಾಕೆಟ್ಗಳ ವಿತರಣೆಯಲ್ಲಿ ಬಾರಿ ಅವ್ಯವಾಹರ ನಡೆಯುತ್ತಲಿದೆ ಎಂದು ತಾ.ಪಂ.ಅಧ್ಯಕ್ಷೆ ಸವಿತಾ ಸುತ್ತಕೋಟಿ ಹೇಳಿದರು.
ಅವರು ಬುಧವಾರ ತಾಲೂಕಾ ಪಂಚಾಯತ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಧಿಢೀರನೇ ಭೇಟಿ ನೀಡಿ ಪರಿಶೀಲಿಸಿದಾಗ ಬೆಳಕೇರಿ ಗ್ರಾಮದ ರೈತ ಬಸವಂತಪ್ಪ ಸಂಕಪ್ಪ ಅಂಬಲಿ ಎಂಬುವ ರೈತನು ಶೆಂಗಾ ಬೀಜದ ಚೀಲಗಳನ್ನು ಖರೀಧಿಸಿದ್ದು, ಸದರಿ ರೈತನು ಎಸ್ಸಿ/ಎಸ್ಟಿ ರೈತನಾಗಿದ್ದು, ಅವನಿಗೆ ಸಾಮಾನ್ಯ ರೈತನೆಂದು ಬಿಲ್ ಹಾಕಿ ಕೊಡಲಾಗಿದೆ. ಇದರಿಂದಾ ಎಸ್ಸಿ/ಎಸ್ಟಿ ರೈತರಿಗೆ ಸರಕಾರ ನೀಡಲಿರುವ ರೀಯಾಯತಿಯನ್ನು ಆ ಜನರಿಗೆ ಮುಟ್ಟಿಸದೇ ಅವರಿಗೆ ವಂಚಿಸುತ್ತಲಿದ್ದಾರೆಂದು ತಾ.ಪಂ.ಅಧ್ಯಕ್ಷರು ಆರೋಪಿಸಿದರು.
ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ಇದೇ ತೆರನಾಗಿ ಸಾಕಷ್ಟು ಸಮಸ್ಯೆಗಳನ್ನು ರೈತರಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಮಾಡುವ ಮೂಲಕ ರೈತರನ್ನು ವಂಚನೆ ಮಾಡಿ ನಿತ್ಯ ರೈತರಿಗೆ ಶೋಷಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ನಡೆಯುವ ಹಗಲು ದರೋಡೆಯನ್ನು ತಡೆಯುವಂತೆ ಮೇಲಾಧಿಕಾರಿಗಳಿಗೆ ತಿಳಿಸಿದರು. ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷೆ ಶಾಂತವ್ವ ದೇಸಾಯಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 