ಪುಲ್ವಾಮದಲ್ಲಿ ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ
ಶ್ರೀನಗರ, ಜ.12: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಟ್ರಾಲ್ನ ಗುಲ್ಶನ್ಪೊರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ರಾಷ್ಟ್ರೀಯ ರೈಫಲ್, ಜಮ್ಮು-ಕಾಶ್ಮೀರ ಪೊಲೀಸ್ನ ವಿಶೇಷ ಕಾರ್ಯಾಚರಣಾ ಪಡೆ ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣಾ ಪಡೆ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿತು ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.
ಆದಾಗ್ಯೂ, ಭದ್ರತಾ ಪಡೆ ಅರಣ್ಯ ಪ್ರದೇಶದ ಒಂದು ನಿರ್ದಿಷ್ಟ ಪ್ರದೇಶಕ್ಕೆ ತಲುಪಿದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳೊಂದಿಗೆ ಸೈನಿಕರ ಮೇಲೆ ದಾಳಿ ನಡೆಸಿದರು. ತಕ್ಷಣ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿತು. ಆಗ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಉಗ್ರರು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲು ಭದ್ರತಾ ಪಡೆ ಆ ಪ್ರದೇಶದ ಎಲ್ಲಾ ಹೊರಹೋಗುವ ದ್ವಾರಗಳನ್ನು ಮುಚ್ಚಿದ್ದು, ಸ್ಥಳಕ್ಕೆ ಹೆಚ್ಚಿನ ಭದ್ರತಾ ಪಡೆಗಳನ್ನು ಕರೆಸಿ ಅಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆ ಸಂಜೆ ದಕ್ಷಿಣ ಕಾಶ್ಮೀರದ ಸೊಪಿಯಾನ್ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ಗಳನ್ನು ಬಂಧಿಸಿದ ಬಳಿಕ ಭದ್ರತಾ ಪಡೆ ಶೋಧ ಕಾರ್ಯ ಕೈಗೊಂಡಿದೆ.
ಸ್ಥಳದಿಂದ ಎಕೆ 47, ಒಂದು ಪಿಸ್ತೂಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 