ರಿಯಾಯಿತಿ ದರದಲ್ಲಿ ಬೀಜ ವಿತರಣೆಗೆ ಆರಂಭ
Seed distribution begins at discounted rates
ಸಂಬರಗಿ 26: ಕೃಷಿ ಇಲಾಖೆ ವತಿಯಿಂದ ಮುಂಗಾರು ಬಿತ್ತನೆ ಮಾಡಲು ಸರ್ಕಾರದಿಂದ ರಿಯಾಯಿತಿ ದರದಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ ಎಂದು ಕೃಷಿ ಅಧಿಕಾರಿ ರವಿ ಬಾಂಗಾರಿ ಹೇಳಿದರು.
ಮದಭಾವಿ ಗ್ರಾಮದ ಪಿಕೆಪಿಎಸ್ ಸಂಘದಲ್ಲಿ ಬೀಜ ವಿತರಿಸಿ ಮಾತನಾಡಿದ ಅವರು ಗಡಿಭಾಗದಲ್ಲಿ ನಿಗದಿತ ಅವಧಿಯಲ್ಲಿ ಮಳೆಯಾದ ಕಾರಣ ರೈತರಿಗೆ ಬಿತ್ತನೆ ಮಾಡಲು ಅನುಕೂಲವಾಗಿದೆ. ಕೃಷಿ ಇಲಾಖೆಯಿಂದ ಉದ್ದು, ಹೆಸರು, ಗೋವಿನ ಜೋಳ, ತೊಗರೆ ಬೀಜ ಲಭ್ಯವಿದ್ದು ರೈತರು ತಮ್ಮ ಪಹಣಿ, ಆಧಾರ ಕಾರ್ಡ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿದ್ದರೆ ಜಾತಿ ಪ್ರಮಾಣ ಪತ್ರ, ರೈತರ ಗುರುತಿನ ಚೀಟಿ ತೆಗೆದುಕೊಂಡು ಬೀಜ ವಿತರಣೆ ಕೇಂದ್ರಕ್ಕೆ ಸಂಪರ್ಕಿಸಿ ತಮಗೆ ಬೇಕಾದ ಬೀಜವನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿದರು.
ಅಪ್ಪಣ್ಣ ಮಗದುಮ್ಮ, ತುಕಾರಾಮ ಮಾಳಿ, ಮಹಾಂತೇಶ ನೇಜ, ಸಹಕಾರಿ ಸಂಘದ ವ್ಯವಸ್ಥಾಪಕ ಅಣ್ಣಾಸಾಬ ಮೆಂಡಿಗೇರಿ, ಕೃಷಿ ಸಖಿಯರಾದ ರೇಣುಕಾ ಕೋಲೆ, ಅನಿತಾ ಅವಳೆ, ವಿಜಯಕುಮಾರ ಮಾಳಿ, ಖಂಡು ಗಾಯಕವಾಡ ಇನ್ನಿತರರು ಉಪಸ್ಥಿತರಿದ್ದರು.
ಲೋಕದರ್ಶನ ವರದಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 