ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
Seed distribution program launched
ತಾಳಿಕೋಟಿ 03: ರೈತ ಸಂಪರ್ಕ ಕೇಂದ್ರದಲ್ಲಿ ಸನ್ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಸ್ಥಳದಲ್ಲಿ ತೊಗರಿ ಬೀಜಗಳಿಗೆ ಬೀಜೋಪಚಾರದ ಪ್ರಾತ್ಯಕ್ಷಿತೆಯನ್ನು ಕೈಗೊಂಡು ರೈತರಿಗೆ ಅದರಿಂದಾಗುವ ಅನುಕೂಲಗಳ ಬಗ್ಗೆ ಮಾಹಿತಿ ಒದಗಿಸಲಾಯಿತು. ರೈತರು ತೊಗರಿ ಬೆಳೆಯಲ್ಲಿ ಅಗಲ ಸಾಲು ಬಿತ್ತನೆ, ಅಂತರ ಬೇಸಾಯ ಪದ್ಧತಿ, 45 ದಿನಗಳ ನಂತರ ಕುಡಿ ಚಿವುಟುವದು ಮತ್ತು ಪಲ್ಸ್ ಮ್ಯಾಜಿಕ್ ಪಲ್ಸ್ ಬುಸ್ಟರ್ ಉಪಯೋಗದಿಂದಾಗಿ ತೊಗರಿ ಬೆಳೆಯಲ್ಲಿ ಇಳುವರಿಯನ್ನು ಹೆಚ್ಚಿಸಬಹುದೆಂದು ತಿಳಿಸಲಾಯಿತು.
ಸದ್ಯ ಕೇಂದ್ರದಲ್ಲಿ 114 ಕ್ವಿಂಟಲ ತೊಗರಿ, 60 ಕೆಜಿ ಹೆಸರು, 960 ಕೆಜಿ ಮೆಕ್ಕೆಜೋಳ, 150 ಕೆಜಿ ಸೂರ್ಯಕಾಂತಿ, 150 ಕೆಜಿ ಹೈಬ್ರಿಡ್ ಸಜ್ಜೆ ದಾಸ್ತಾನಿಕರಿಸಲಾಗಿದೆ. ಕಾರ್ಯಕ್ರಮದಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಸನಗೌಡ ಮಾಡಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ನಾವದಗಿ, ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್,ರವಿ ಗೌಡ ಪಾಟೀಲ, ಹನುಮಂತರಾಯಗೌಡ ಗೂಗಲ್, ಕೃಷಿ ಅಧಿಕಾರಿಗಳಾದ ಮಹೇಶ ಜೋಶಿ ಸಿಬ್ಬಂದಿಗಳಾದ ಸಂಗಮೇಶ ಪಾಟೀಲ, ಕಿರಣ ಬೊಮ್ಮನಹಳ್ಳಿ, ಹನುಮಂತರಾಯ ಕುಂಟರೆಡ್ಡಿ, ವಿರುಪಾಕ್ಷಿ ನಂದಿಕೋಲ, ಬಸವರಾಜ ಜಾಲವಾದಿ, ಹಿರಗಪ್ಪ ಅರಳಿಕಟ್ಟಿ ಹೋಬಳಿ ವ್ಯಾಪ್ತಿಯ ರೈತರು ಮತ್ತು ಕೃಷಿ ಸಖಿಯರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 