ತಾಳಿಕೋಟೆಯಲ್ಲಿ ಆ.26ರಿಂದ ಸೀರತ್ ಅಭಿಯಾನ
Seerat campaign in Talikote from August 26
ತಾಳಿಕೋಟಿ: ಜಮಾತೆ ಇಸ್ಲಾಮಿ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ಆ.26ರಿಂದ ಸೆ.6ರವರೆಗೆ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ ಶೀರ್ಷಿಕೆಯಡಿ ಸೀರತ್ ಅಭಿಯಾನ ನಡೆಯಲಿದೆ ಎಂದು ಅಭಿಯಾನದ ಉಪ ಸಂಚಾಲಕ ಹುಸೇನಪಟೇಲ ಹೇಳಿದರು. ಪಟ್ಟಣದಲ್ಲಿ 10 ದಿನಗಳ ಕಾಲ ವಿಚಾರ ಸಂಕಿರಣ, ಮುಖಂಡರ ಸಭೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆ, ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಪ್ರವಾದಿಯವರ ಜೀವನ, ಸಂದೇಶ, ಮಾನವೀಯ ಮೌಲ್ಯಗಳು, ಸಾಮಾಜಿಕ ನ್ಯಾಯ, ಶಾಂತಿ ಹಾಗೂ ಸೌಹಾರ್ದತೆಯ ಕುರಿತು ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಭಿಯಾನ ಯಶಸ್ವಿಗೆ ಎಲ್ಲ ಸಮಾಜಗಳ ಜನರು ಸಹಕಾರ ನೀಡಬೇಕು ಎಂದು ಜಮಾತೆ ಇಸ್ಲಾಮಿ ಹಿಂದ್ ನಗರ ಶಾಖೆ ಅಧ್ಯಕ್ಷ ಮುಜಾಹೀದ ನಮಾಜಕಟ್ಟಿ ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 