ದರ್ಭಾಂಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ’ದಾಮಾಯಣ’ ಆಯ್ಕೆ
ಬೆಂಗಳೂರು, ಫೆ 03 : ಮಂಗಳೂರು ಸೊಗಡಿನ ಕನ್ನಡ ಚಿತ್ರ ’ದಾಮಾಯಣ’ ಬಹು ಭರವಸೆ ಮೂಡಿಸಿರುವ ಹೊಸಬರ ಚಲನಚಿತ್ರ ತಿಳಿ ಹಾಸ್ಯದ ಚಿತ್ರವನ್ನು ’ಶ್ರೀಮುಖ’ ರಚಿಸಿ ನಿರ್ದೇಶಿಸಿದ್ದಾರೆ
ಈಗಾಗಲೇ ’ಪಿಕ್ ಯುವರ್ ಫ಼್ಲಿಕ್’ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದ ಚಿತ್ರ, ಇದೀಗ ೭ನೇ ದರ್ಭಾಂಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ
ಚಲನಚಿತ್ರೊತ್ಸವವು ಫೆಬ್ರವರಿ ೭ರಿಂದ ೩ ದಿನಗಳ ಕಾಲ ಬಿಹಾರದ ದರ್ಭಾಂಗ ನಗರದಲ್ಲಿ ನಡೆಯಲಿದೆ.
ಚಿತ್ರತಂಡ ಫೇಸ್ಬುಕ್ನಲ್ಲಿ ಬಿಡುಗಡೆ ಮಾಡಿದ್ದ ದಾಮಾಯಣದ ಮೊದಲ ಟೀಸರ್ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಟೀಸರ್ ಹನ್ನೊಂದು ಲಕ್ಷಕ್ಕೂ ಮಿಕ್ಕಿ ಜನರಿಂದ ವೀಕ್ಷಿಸಲ್ಪಟ್ಟಿದೆ. ಹೊಸಬರ ಚಿತ್ರಕ್ಕೆ ದೊರಕಿದ ಮೆಚ್ಚುಗೆಗೆ ಚಿತ್ರತಂಡ ಸಂತಸ ವ್ಯಕ್ತಪಡಿಸಿದೆ.
ಟೀಸರ್ನ ಉದ್ದಕ್ಕೂ ಮಂಗಳೂರು ಕನ್ನಡದಲ್ಲಿ ಮಾತನಾಡುವ ದಾಮೋದರ ಪುತ್ತೂರಿನವನು. ದಾಮೋದರನಿಗೆ ತಾನೊಬ್ಬ ಪ್ರತಿಭಾವಂತ ಎನ್ನುವ ಹೆಮ್ಮೆ. ಆದರೆ ಅವನ ಪ್ರತಿಭೆಗೆ ಎಟುಕಿದ್ದು ಮನೆಯ ಅಂಗಳದಿಂದ ಅಡಿಕೆ ಕದಿಯುವ ಹಾಗೂ ಟಿಕ್-ಟಾಕ್ನಲ್ಲಿ ಹಾಡುವ ಚಾಳಿಗಳು. ದಾಮೋದರನ ತಂದೆ ಕೃಷಿಕ, ತಾಯಿ ಗೃಹಿಣಿ. ದಾಮೋದರನಿಗೆ ಮಾತ್ರ- ತಾನು ಪೇಟೆಗೆ ಹೋಗಿ ಹೆಸರು ಮಾಡಬೇಕು ಎನ್ನುವ ಬಯಕೆ. ದಾಮೋದರನ ಹಾಸ್ಯಾಸ್ಪದ ವ್ಯಕ್ತಿತ್ವವೇ ಟೀಸರ್ನ ಪ್ರಮುಖ ಅಂಶ.
ದಾಮಾಯಣದಲ್ಲಿ ಐದು ಹಾಡುಗಳಿವೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 