ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ

ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ  Selected for state level award


ತಾಳಿಕೋಟೆ 24: ತಾಲ್ಲೂಕಿನ ಕಲಕೇರಿ-ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಬಸವರಾಜ್ ಕುಂಬಾರ ಅವರಿಗೆ ಬೆಂಗಳೂರಿನ ರಾಮೋಹಳ್ಳಿಯ ಸಿದ್ದಾರೂಡ ಆಶ್ರಮ ಹಾಗೂ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್‌ ವತಿಯಿಂದ ಕೊಡಮಾಡುವ 2026 ನೇ ಸಾಲಿನ ಸದ್ಗುರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.    

ಜ-25 ರಂದು ಭಾನುವಾರ ಸಿದ್ಧಾರೂಢ ಮಿಶನ್ ಆಶ್ರಮ ರಾಮೋಹಳ್ಳಿ ಇಲ್ಲಿ ನಡೆಯುವ ಗಣರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.