ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Selected for state level sports meet
ಗದಗ 23: ದಿನಾಂಕ: 21-02-2026 ರಿಂದ 22-02-2026 ರಂದು ಬೆಳಗಾವಿಯಲ್ಲಿ ನಡೆದ 07 ಜಿಲ್ಲೆಗಳ ವಿಭಾಗ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ /ಸಿಬ್ಬಂದಿಗಳ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಸದರಿ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳಲ್ಲಿ ಉಪನಿರ್ದೇಶಕರಾದ ನಂದಾ ಹಣಬರಟ್ಟಿ ಇವರ ನೇತ್ರತ್ವದಲ್ಲಿ ವಿಭಾಗಮಟ್ಟದ ಅಧಿಕಾರಿಗಳ/ಸಿಬ್ಬಂದಿಗಳ ಸಾಂಸ್ಕೃತಿ ಹಾಗೂ ಕ್ರೀಡಾಕೂಟಗಳಲ್ಲಿ ಭಾವಗೀತೆಯಲ್ಲಿ ಶ್ರೀಕಾಂತ ಹರಣಹುಣಸಿ, ಮಹಿಳೆಯರ ಥ್ರೋಬಾಲ್, ಹಾಗೂ ಪುರುಷರ ಕ್ರೀಕೆಟ ತಂಡ ವಿಜೇತರಾಗಿ ಬೆಂಗಳೂರನಲ್ಲಿ ನಡೆಯುವ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಎಲ್ಲ ಕ್ರೀಡಾಪಟುಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ. ನಂದಾ ಹಣಬರಟ್ಟಿ, ಜಿಲ್ಲಾ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಮಂಜುಳಾ ಸೋಮಕ್ಕನವರ, ವಿದ್ಯಾಮತಿ ಕುರಹಟ್ಟಿ. ಸಹಾಯಕ ನಿರ್ದೇಶಕರಾದ ಗೋಪಾಲ ಲಮಾಣಿ, ಬಿವಿ ಬಡಿಗೇರ, ಗೀತಾ ಆಲೂರ, ಉಧಯಕುಮಾರ ಯಲಿವಾಳ, ಕಛೇರಿಯ ಅಧೀಕ್ಷರಾದ ಮಂಜುಳಾ ಎನ್, ಮುತ್ತಣ್ಣ ಸಂಕನೂರ, ಚಂದ್ರ್ಪ ಮಾದರ ಇವರು ಶುಭಾಶಯ ಕೋರಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 