ನಮ್ಮ ಕರ್ನಾಟಕ ಸೇನೆ ಪದಾಧಿಕಾರಿಗಳ ಆಯ್ಕೆ
Selection of Namma Karnataka Army Office bearers
ಸಿಂದಗಿ 29: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಮ್ಮ ಕರ್ನಾಟಕ ಸೇನೆ ಸಿಂದಗಿ ತಾಲೂಕ ನೂತನ ಪದಾಧಿಕಾರಿಗಳನ್ನು ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಯಿತು.
ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ ಮಾತನಾಡಿ ನಮ್ಮ ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆಯಾಗಿದೆ ಇಂತಹ ನಮ್ಮ ಭಾಷೆಗೆ ಧಕ್ಕೆ ತರುವಂತ ಕೆಲಸ ಯಾರೇ ಮಾಡಿದರು ಅದನ್ನು ನಮ್ಮ ಸಂಘಟನೆಯ ಪದಾಧಿಕಾರಿಗಳಾದ ತಾವು ಕಂಡಿಸಿ ಕನ್ನಡ ನಾಡು, ನುಡಿ, ಜಲ ಕ್ಕಾಗಿ ಹಾಗೂ ಹಿಂದುಳಿದವರ, ದೀನ ದಲಿತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಬೇಕೆಂದು ಹೇಳಿದರು.
ಅಧ್ಯಕ್ಷರಾಗಿ ಪುಂಡಲೀಕ ಬಿರಾದಾರ, ಉಪಾಧ್ಯಕ್ಷರಾಗಿ ಮನ್ಸೂರ ಪತ್ತೇಪುರ, ತಾಲೂಕ ಯುವ ಘಟಕ ಅಧ್ಯಕ್ಷರಾಗಿ ಸಿದ್ದು ಬಡಿಗೇರ, ಗೌರವ ಅಧ್ಯಕ್ಷರಾಗಿ ಸಂಗಪ್ಪ ಚೌರ, ಪ್ರಧಾನ ಕಾರ್ಯದರ್ಶಿಯಾಗಿ ಸಾಗರ ಜೇರಟಗಿ, ಸಹ ಕಾರ್ಯದರ್ಶಿಯಾಗಿ ಆಕಾಶ ಪೂಜಾರಿ, ರೈತ ಘಟಕ ಅಧ್ಯಕ್ಷರಾಗಿ ರಜಾಕಸಾಬ ಚಾಂದಕವಟಗಿ, ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಉಮೇಶ ಮಯೂರಮಠ, ಅವಿನಾಶ ಯಂಕಂಚಿ, ಸಾಗರ ಜೇರಟಗಿ, ಇನ್ನು ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 