ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯ ವಿದ್ಯಾರ್ಥಿ ವಿಭಾಗದ ಪದಾಧಿಕಾರಿಗಳ ಆಯ್ಕೆ
Selection of office bearers of the Student Section of the Institute of Accountants of India
ಬಳ್ಳಾರಿ 01: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಬಳ್ಳಾರಿ ಶಾಖೆಯ ವಿದ್ಯಾರ್ಥಿಗಳ ವಿಭಾಗಕ್ಕೆ(ಖಋಂಖಂ) ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಶಾಖೆಯ ವಿದ್ಯಾರ್ಥಿಗಳ ವಿಭಾಗದ ಅಧ್ಯಕ್ಷರಾಗಿ ಸಿ.ಎ, ಶರಣ್ ಪಾಟೀಲ್, ಉಪಾಧ್ಯಕ್ಷರಾಗಿ ನಿಶ್ಮಿತಾ ಕೆ.ಎನ್, ಕಾರ್ಯದರ್ಶಿಯಾಗಿ ವಿಷ್ಣು ಕಾರ್ತಿಕ್, ಖಜಾಂಚಿಯಾಗಿ ತನಿಷಾ ಮತ್ತು ಸದಸ್ಯರಾಗಿ ಮಧುಸೂನದ ಅವರನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ವಿಭಾಗದ ಮುಖ್ಯ ಕೆಲಸವೆಂದರೆ ವಿದ್ಯಾರ್ಥಿಗಳಲ್ಲಿ ಸಿಎ ಕೋರ್ಸಿನ ಬಗ್ಗೆ ಅರಿವು ಮೂಡಿಸುವುದು ಮತ್ತು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸಿ ಅವರನ್ನು ವಿದ್ಯಾವಂತರಾಗಿ ಮತ್ತು ಸಮಾಜದಲ್ಲಿ ಯೋಗ್ಯ ನಾಗರಿಕರಾಗಿ ಮಾಡುವುದು. ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯ ದಕ್ಷಿಣ ಪ್ರಾಂತೀಯ ಮಾಜಿ ಅಧ್ಯಕ್ಷರಾದ ಸಿಎ ಪನ್ನರಾಜ್ ಮತ್ತು ವಿದ್ಯಾರ್ಥಿ ವಿಭಾಗದ ದಕ್ಷಿಣ ಪ್ರಾಂತೀಯ ಅಧ್ಯಕ್ಷರಾದ ಸಿಎ ಪ್ರಮೋದ್ ಆರ್ ಹೆಗಡೆ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಶಾಖೆಯ ಅಧ್ಯಕ್ಷರಾದ ಸಿಎ ಗಜರಾಜ್ ಡಿ, ಕಾರ್ಯದರ್ಶಿಗಳಾದ ಸಿಎ ವಿಶ್ವನಾಥ್ ಆಚಾರಿ ಮತ್ತು ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 