ಸಮಾಜ ಸೇವಾ ಕಾರ್ಯಕರ್ತರ ಆಯ್ಕೆ
Selection of social service workers
ಕಂಪ್ಲಿ 08 : ಪಟ್ಟಣದ ಅತಿಥಿ ಗೃಹದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಸಂಘಟನಾ ಸಭೆ ಹಾಗೂ ತಾಲೂಕು ಘಟಕದ ಆಯ್ಕೆ ಸಮಾರಂಭ ನಡೆಯಿತು.
ವೇದಿಕೆಯ ರಾಜ್ಯ ಕಾರ್ಯದರ್ಶಿ ಡಾ.ರಾಜಕುಮಾರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸ್ವಾತಂತ್ರ್ಯ, ಸಹೋದರತೆ, ಸಮಾನತೆಗಾಗಿ ಮತ್ತು ಜನರ ಧ್ವನಿಯಾಗಿ ಕೆಲಸ ಮಾಡುವ ಧ್ಯೇಯ ಹೊಂದಿದೆ. ನೂತನ ಪದಾಧಿಕಾರಿಗಳು ವೇದಿಕೆಯ ಏಳಿಗೆಗೆ ಹಾಗೂ ಜನಪರ ಸೇವಾ ಕಾರ್ಯ ಮಾಡಲು ಮುಂದಾಗಬೇಕು ಎಂದರು.
ನಂತರ ಮುಖಂಡ ವೀರಭದ್ರಗೌಡ ಮಾತನಾಡಿ, ಹುಟ್ಟು ಸಾವಿನ ಮಧ್ಯದಲ್ಲಿರುವ ಜೀವನದಲ್ಲಿ ಏನಾದರೊಂದು ಸಾಧನೆ ಮಾಡಿದರೆ ಮಾತ್ರ ಸಾಧನೆಗಳು ಅವಿಸ್ಮರಣೆಯಾಗಿ ಉಳಿಯಲು ಸಾಧ್ಯ. ವೇದಿಕೆಯ ಧ್ಯೇಯ ಉದ್ದೇಶಗಳು ಕಟ್ಟಕಡೆಯ ಮನುಷ್ಯನಿಗೆ ಸೌಲಭ್ಯಗಳೊಂದಿಗೆ ಒದಗಿಸಿ ಕೊಡುವ ಜೊತೆಗೆ ಜನರ ಸಂಕಷ್ಟವನ್ನು ಆಲಿಸಿ, ಹೋರಾಟದ ಮೂಲಕ ಪರಿಸರಿಸಬೇಕಾಗಿದೆ. ಎಲ್ಲರು ಒಗ್ಗೂಡಿ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಸಮಾಜಕ್ಕೆ ನ್ಯಾಯ ಒದಗಿಸಿಕೊಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪಿಎಸ್ಐ ಬಸವರಾಜ, ಮುಖಂಡರಾದ ಬಿ.ರಮೇಶ ಉಪ್ಪಾರ, ಷಣ್ಮುಕಪ್ಪ, ಎನ್.ಬಸವರಾಜ ಸೇರಿದಂತೆ ಇತರರು ಇದ್ದರು. ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ಕಂಪ್ಲಿ ತಾಲೂಕು ಘಟಕಕ್ಕೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿದರು, ಹೆಚ್.ಮರಿಯಪ್ಪ(ಅಧ್ಯಕ್ಷ), ಹೆಚ್.ಗೋಪಾಲ(ಪ್ರಧಾನ ಕಾರ್ಯದರ್ಶಿ), ರಿಯಾಜ್ ಅಹ್ಮದ್(ಕಾರ್ಯದರ್ಶಿ) ಇವರು ಆಯ್ಕೆಗೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 