ಹಿರಿಯ ನಾಗರಿಕರ ಸಂಘ : ಅರಿವು ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 09: ಇತ್ತಿಚಿಗೆ ಹಿರಿಯ ನಾಗರಿಕರ ಸಂಘದ ವತಿಯಿಂದ ಬೆಳಗಾವಿಯ ಪೋಲಿಸ ಹೆಡ್ಕ್ವಾಟರ್ಸ ಸಮುದಾಯ ಭವನದಲ್ಲಿ ಹಿರಿಯ ನಾಗರಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ವಾಯ್. ಭೆಂಡಿಗೇರಿ ಅವರು ಮಾತನಾಡಿ, ಹಿರಿಯ ನಾಗರಕರು ಅನೇಕ ರೀತಿಯಲ್ಲಿ ಶೋಷಿತರಾಗುತ್ತಿದ್ದು, ಅವರಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸಂಘವು ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸುವುದು ಸಂಘದ ಮೊದಲ ಕೆಲಸವಾಗಿದೆ.ಹಿರಿಯರಿಗೆ ಆಗುವ ತೊಂದರೆಗಳನ್ನು ನಿವಾರಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ರಾಜ್ಯ ಘಟಕದ ಪ್ರಧಾನ ಕಾರ್ಯದಶರ್ಿ ಎಂ.ಎಸ್.ಮುದಕವಿ ಅವರು ಮಾತನಾಡಿ, ಸಂಘದ ಕಾರ್ಯಚಟುವಟಿಕೆಗಳು, ಮತ್ತು ಧೈಯೋದ್ದೇಶಗಳ ಕುರಿತು ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಸಂಘದ ಸದಸ್ಯತ್ವ ಪಡೆದುಕೊಂಡು ಸಂಘದ ಬೆಳವಣಿಗೆಗೆ ಸಹಕರಿಸಿಬೇಕೆಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ನಿವೃತ್ತ ಪೋಲಿಸ ಅಧಿಕಾರಿಗಳಾದ ಆರ್.ಬಿ,ಪಾಟೀಲ, ಅಶೋಕ ಕುರೇರ, ಎಸ್.ಎಸ್.ಮುರುಗೋಡ, ಬೆಳಗಾವಿ ಹಿರಿಯ ನಾಗರಿಕರ ಸಂಘದ ಪದಾಧಿಕಾರಿಗಳಾದ ಬಸವರಾಜ ಗೊಮಾಡಿ, ಪ್ರಸಾದ ಹಿರೇಮಠ, ಮಹಾದೇವ ಬಾಪಟ ಸೇರಿದಂತೆ ನಿವೃತ್ತ ಪೋಲಿಸ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 