ಸುರಭಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆ
Senior Citizens Day celebrated at Surabhi Old Age Home
ಕೊಪ್ಪಳ 03: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಭೋದಕ ಆಸ್ಪತ್ರೆ ಕಿಮ್ಸ್, ಜಿಲ್ಲಾ ಆಯುಷ ಕ್ಲಿನಿಕ್ ಹಾಗೂ ಎನ್.ಸಿ.ಡಿ. ಕ್ಲಿನಿಕ್ ಕೊಪ್ಪಳ, ಇವರ ಸಂಯುಕ್ತಾಶ್ರಯದಲ್ಲಿ ಅ.4 ರಂದು ಸುರಭಿ ವೃದ್ಧಾಶ್ರಮದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅಂಗವಾಗಿ ಸ್ಥಳೀಯ ಮತ್ತು ಜಾಗತಿಕ ಕ್ರಿಯೆಗೆ ಚಾಲನೆ ನೀಡುವ ಹಿರಿಯ ವ್ಯಕ್ತಿಗಳು: ನಮ್ಮ ಅಕಾಂಕ್ಷೆಗಳು, ನಮ್ಮ ಯೋಗಕ್ಷೇಮ, ನಮ್ಮ ಹಕ್ಕುಗಳು ಎಂಬ ಘೋಷವಾಕ್ಯದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಬೋಧಕ ಆಸ್ಪತ್ರೆ ಕಿಮ್ಸ್ನ ಜನರಲ್ ಮೆಡಿಸಿನ್ ವಿಭಾಗದ ಡಾ. ಸ್ವರಾಜಗೌಡ, ಆಯುಷ್ ವೈದ್ಯಾಧಿಕಾರಿ ಡಾ.ಸರ್ವಮಂಗಳ, ಜಿಲ್ಲಾ ಎನ್.ಸಿ.ಡಿ. ಸಂಯೋಜಕಿ ಡಾ.ಜಯಶ್ರೀ ಎಂ.ಎಚ್., ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಶಿವಾನಂದ ವ್ಹಿ.ಪಿ ಅವರು ವೃದ್ಧರ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.
ಜಿಲ್ಲಾ ಆಸ್ಪತ್ರೆಯ ಎನ್.ಸಿ.ಡಿ ಕ್ಲಿನಿಕ್ನ ಆಪ್ತಸಮಾಲೋಚಕರಾದ ಶಿವಪುತ್ರ್ಪ, ಫಿಜಿಯೋಥೆರಪಿಸ್ಟ್ ಖಾಜಾ ಹುಸೇನ್, ತಂತ್ರಜ್ಞರಾದ ರೇಖಾ ಗುಬ್ಬಿ, ಶುಶ್ರೂಷಕ ಅಧಿಕಾರಿ ಮಲ್ಲೇಶಪ್ಪ, ಮಲ್ಪಿಸ್ಕಿಲ್ ವರ್ಕರ್ ವೀರೇಶ ಸೇರಿದಂತೆ ವೃದ್ದಾಶ್ರಮದ ಸಿಬ್ಬಂದಿ, ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಫಿಜಿಯೋಥೆರಪಿ ಕಾರ್ಯಾಗಾರವನ್ನು ಹಮ್ಮಿಕೊಂಡು ಹಿರಿಯ ನಾಗರಿಕರಿಗೆ ಚಿಕಿತ್ಸೆ ನೀಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 