ಹಾವನೂರು ಗುತ್ತಲ ಬೆಳ್ಳಟ್ಟಿ ಮಾರ್ಗಗಳಿಗೆಯ ಹೆಚ್ಚು ಬಸ್ ಬಿಡುವಂತೆ ಹಿರಿಯ ನಾಗರಿಕರಿಂದ ಮನವಿ
Senior citizens request more buses on the Havanuru-Guttala-Bellatti routes
ಲಕ್ಷ್ಮೇಶ್ವರ" 27 : ಪಟ್ಟಣದಿಂದ ಹಾವನೂರು ಗುತ್ತಲ ಬೆಳ್ಳಟ್ಟಿ ಮಾರ್ಗಗಳಿಗೆ ಬೆಳಗಿನ ಸಮಯದಲ್ಲಿ ಸಂಚರಿಸುವ ಬಸ್ಸುಗಳನ್ನು ಬಿಟ್ಟರೆ ಮತ್ತೆ ಬಸ್ಸುಗಳು ಇರುವುದಿಲ್ಲ ಇದರಿಂದ ವೃದ್ಧರು ರೈತರು ವ್ಯಾಪಾರಸ್ಥರು ಶಾಲಾ ಕಾಲೇಜು ವಿದ್ಯಾರ್ಥಿಗಳು ನಿತ್ಯ ಸಾಕಷ್ಟು ತೊಂದರೆಯನ್ನು ಅನುಭವಿಸುವಂತಾಗಿದೆ ಅದಕ್ಕಾಗಿ ಹಾವನೂರು ಗುತ್ತಲ ಬೆಳ್ಳಟ್ಟಿ ಬೂದಿಹಾಳ ಕೊಕ್ಕರಗಂದಿ ನಾಗರಮುಡುವು ಬಿಜ್ಜೂರು ಕೊಂಚಿಗೇರಿ ಬೆಳ್ಳಟ್ಟಿ ಮಾರ್ಗವಾಗಿ ಲಕ್ಷ್ಮೇಶ್ವರ ಘಟಕದಿಂದ ಹೆಚ್ಚಿನ ಬಸ್ ಬಿಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಗೋವನಕೊಪ್ಪ ಅವರುಲಕ್ಷ್ಮೇಶ್ವರ ತಾಲೂಕು ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಮನವಿ ಸಲ್ಲಿಸಿದರು.
ಅವರ ಮನೆಗೆ ಸ್ಪಂದಿಸಿದ ಹಿರಿಯರ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ ಆರ್ ಲಕ್ಕುಂಡಿಮಠ ಚಂಬಣ್ಣ ಬಾಳಿಕಾಯಿ ಐ ಎಸ ಮಡಿವಾಳರ ಶಿಬೆರ್ಪ ವಾಲಿಶೆಟ್ಟರು ಅವರ ನೇತೃತ್ವದಲ್ಲಿ ಲಕ್ಷ್ಮೇಶ್ವರ ಸಾರಿಗೆ ಘಟಕದ ವ್ಯವಸ್ಥಾಪಕಿಯಾದ ಸವಿತಾ ಆದಿ ಅವರಿಗೆ ಮನವಿ ಸಲ್ಲಿಸಿ ಹೆಚ್ಚು ಬಸ್ ಬಿಡುವಂತೆ ಒತ್ತಾಯಿಸಿದರು ಮನವಿ ಸ್ವೀಕರಿಸಿದ ಸಾರಿಗೆ ಘಟಕದ ವ್ಯವಸ್ಥಾಪಕಿಅವರು ಸಂಬಂಧಿಸಿದ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಬಸ್ ಬಿಡುವ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 