ಪತ್ರಕರ್ತರ ಸಂಘವು ಪ್ರತಿ ವರ್ಷ ಕೊಡ ಮಾಡುವ ದತ್ತಿ ನಿಧಿ ಪ್ರಶಸ್ತಿಗೆ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಎಂ .ಚಿರಂಜೀವಿ
Senior journalist M. Chiranjeevi has been awarded the Endowment Fund Award given annually by the Jou
ರಾಣಿಬೆನ್ನೂರ 19 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪ್ರತಿ ವರ್ಷ ಕೊಡ ಮಾಡುವ ದತ್ತಿ ನಿಧಿ ಪ್ರಶಸ್ತಿಗೆ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ ಎಂ .ಚಿರಂಜೀವಿ ಹಾಗೂ ಮನೋಹರ ಮಲ್ಲಾಡದ ಅವರನ್ನು ನಗರದ ಬಿಜೆಪಿ ಕಾರ್ಯಲಯದಲ್ಲಿ ಬುಧವಾರದಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಮತ್ತು ನಗರಸಭಾ ಸದಸ್ಯರುಗಳು, ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಸಮಾಜದ ಅಂಕು ಡೊಂಕು ತಿದ್ದಿ ಸರಿ ದಾರಿಗೆ ತರುವಲ್ಲಿ ಪತ್ರಕರ್ತರ ಸೇವೆ ಅಮೂಲ್ಯವಾಗಿದೆ. ಅದರಲ್ಲೂ ರಾಜಕಾರಣಿಗಳನ್ನು ಸಮಾಜ ಮುಖಿ ಕಾರ್ಯಮಾಡುವಲ್ಲಿ ಎಡವಿದಾಗ ಎಚ್ಚರಿಸಿ ಸನ್ಮಾರ್ಗಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅಂತಹ ಉತ್ತಮ ಸೇವೆ ಸಲ್ಲಿಸಿದ ಚಿರಂಜೀವಿ ಹಾಗೂ ಮನೋಹರ ಮಲ್ಲಾಡದ ಅವರನ್ನು ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗುರುತಿಸಿ ಪುರಸ್ಕೃರಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ನಗರಸಭೆಯ ಉಪಾಧ್ಯಕ್ಷ ನಾಗರಾಜ ಪವಾರ, ನಗರಸಭಾ ಸದಸ್ಯರಾದ ಪ್ರಕಾಶ ಪೂಜಾರ, ನಿಂಗರಾಜ ಕೋಡಿಹಳ್ಳಿ, ಮಲ್ಲಣ್ಣ ಅಂಗಡಿ, ರಮೇಶ ಕರಡಣ್ಣನವರ, ಮುಖಂಡರಾದ ಬಸವರಾಜ ಚಳಗೇರಿ, ಸಿದ್ದಣ್ಣ ಚಿಕ್ಕಬಿದರಿ, ರಾಯಣ್ಣ ಮಾಕನೂರ, ಕುಬೇರ್ಪ ಕೊಂಡಜ್ಜಿ, ಮಾಳಪ್ಪ ಪೂಜಾರ, ಅಮೋಘ ಬಾದಾಮಿ, ಪವನಕುಮಾರ ಮಲ್ಲಾಡದ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 